ವಿದ್ಯುತ್ ಶಾರ್ಟ್ ಸರ್ಕ್ಯೂಟ್ʼನಿಂದ ಕಬ್ಬಿನ ಗದ್ದೆಗೆ ಬೆಂಕಿ: 4 ಎಕರೆ ಬೆಳೆ ಸುಟ್ಟು ಕರಕಲು

0
Spread the love

ಯಾದಗಿರಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ʼನಿಂದ ನಾಲ್ಕು ಎಕರೆ ಜಮೀನಿನಲ್ಲಿ ಬೆಳೆದ ಕಬ್ಬು ಬೆಂಕಿಗೆ ಸುಟ್ಟು ಕರಕಲಾದ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಗೆದ್ದಲಮರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವಪುತ್ರ ಎಂಬ ರೈತನಿಗೆ ಸೇರಿದ ಕಬ್ಬಿನ ಬೆಳೆಯಾಗಿದೆ.

Advertisement

ಜಮೀನಿನಲ್ಲಿರುವ ಪಂಪ್ ಸೆಟ್ ನ ವಿದ್ಯುತ್ ವೈಯರ್ ನಿಂದ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಈ ದುರ್ಘಟನೆ ನಡೆದಿದೆ. ಬೆಂಕಿ ನಂದಿಸಲು ಗ್ರಾಮಸ್ಥರಿಂದ ಹರಸಾಹಸ ಪಟ್ಟಿದ್ದಾರೆ. ಆದ್ರೆ ಬೆಂಕಿ‌ ನಂದಿಸುವಷ್ಟರಲ್ಲಿ ಕಬ್ಬಿನ ಬೆಳೆ ಸುಟ್ಟು ಕರಕಲಾಗಿದೆ. ಇನ್ನೂ ಬೆಳೆ ಕಳೆದುಕೊಂಡು ಅನ್ನದಾತ‌ ಶಿವಪುತ್ರಪ್ಪ ಕಂಗಲಾಗಿದ್ದು, ಕೊಡೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here