HomeCrime Newsಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಪ್ರಕರಣ: ಕೊನೆಗೂ ಬಯಲಾಯ್ತು ಅಸಲಿ ಕಾರಣ.!

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಪ್ರಕರಣ: ಕೊನೆಗೂ ಬಯಲಾಯ್ತು ಅಸಲಿ ಕಾರಣ.!

For Dai;y Updates Join Our whatsapp Group

Spread the love

ಬೆಂಗಳೂರು: ಒಂದೇ ಕುಟುಂಬದ ನಾಲ್ವರು ಆ*ತ್ಮಹತ್ಯೆ ಮಾಡಿಕೊಂಡ ಪ್ರಕರಣವೊಂದು ನಗರದಲ್ಲಿ ಬೆಳಕಿಗೆ ಬಂದಿದೆ. ಮನೆಯಲ್ಲಿ ನೇಣು ಬಿಗಿದುಕೊಂಡು ದಂಪತಿ ಮತ್ತು ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಲಹಂಕ ‌ತಾಲೂಕಿನ ಸಿಂಗನಾಯಕನಹಳ್ಳಿಯ ಯಡಿಯೂರಪ್ಪ ನಗರದಲ್ಲಿ ಘಟನೆ ನಡೆದಿದೆ. ನಾಲ್ವರು ಕಳೆದ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ರಾಜಾನುಕುಂಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಹಣಕಾಸಿನ ಆರ್ಥಿಕ ತೊಂದರೆಯಿಂದ ಮನನೊಂದು ಕುಟುಂಬ ಆತ್ಮಹತ್ಯೆಗೆ ಶರಣಾಗಿದೆ.

5 ವರ್ಷಗಳಿಂದ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅವಿನಾಶ್​, 5 ವರ್ಷದ ಹಿಂದೆ ಕಲಬುರಗಿಯಿಂದ ಬೆಂಗಳೂರಿಗೆ ಕುಟುಂಬ ಸಮೇತ ಬಂದಿದ್ದರು. ಗಂಡನ ಆರ್ಥಿಕ ಸಂಕಷ್ಟದಿಂದ ಪತ್ನಿ ಮಮತಾ ಆತ್ಮಹತ್ಯೆಗೆ ನಿರ್ಧರಿಸಿದ್ದಾರೆ. ಮೊದಲಿಗೆ ಇಬ್ಬರು ಮಕ್ಕಳ ಕತ್ತು ಹಿಸುಕಿ ಕೊಂದಿದ್ದು, ನಂತರ ತಾನು ಹಗ್ಗ ಕಟ್ಟಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಗಂಡನಿಗೆ ಕರೆ ಮಾಡಿ ಮಮತಾ ಮಾತನಾಡಿದ್ದಾರೆ.

ಇನ್ನು ಸಂಜೆ ಪತಿ ಹಲವು ಭಾರಿ ಕರೆ ಮಾಡಿದರು ಫೋನ್ ರಿಸೀವ್ ಮಾಡಿಲ್ಲ. ಹೀಗಾಗಿ ಮೇಲಿನ ಮನೆಯವರಿಗೆ ಕರೆ ಮಾಡಿ ಪತ್ನಿಗೆ ಫೋನ್ ನೀಡುವಂತೆ ಪತಿ ಅವಿನಾಶ್ ಹೇಳಿದ್ದಾರೆ. ಈ ವೇಳೆ ಹಲವು ಭಾರೀ ಬಾಗಿಲು ಬಡಿದರು ತೆಗೆದಿಲ್ಲ. ಹೀಗಾಗಿ ರಾತ್ರಿ 9 ಗಂಟೆ ಸುಮಾರಿಗೆ ಅವಿನಾಶ್​ ಮನೆಗೆ ವಾಪಸ್ ಬಂದಿದ್ದಾರೆ.

ಮತ್ತೊಂದು ಕೀ ಇಂದು ಮನೆ ಬೀಗ ತೆಗೆದು ಒಳ ಹೋದಾಗ ಮಕ್ಕಳನ್ನ ಸಾಯಿಸಿ ಪತ್ನಿ ಆತ್ಮಹತ್ಯೆಗೆ ಶರಣಾಗಿರುವುದು ಪತ್ತೆಯಾಗಿದೆ. ಪತ್ನಿ ಮಕ್ಕಳ ಕೊಲೆ ಕಂಡು ಅವಿನಾಶ್ ಬೆಚ್ಚಿಬಿದ್ದಿದ್ದಾರೆ. ನಂತರ ಪತ್ನಿ ಮೃತದೇಹ ತೆಗೆದು ಅದೇ ಹಗ್ಗಕ್ಕೆ ಅವಿನಾಶ್ ಕೂಡ ನೇಣಿಗೆ ಶರಣಾಗಿದ್ದಾರೆ. ಸದ್ಯ ನಾಲ್ವರ ಮೃತದೇಹಗಳನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಯಲಿದೆ. ರಾಜಾನುಕುಂಟೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!