ವಿಜಯಸಾಕ್ಷಿ ಸುದ್ದಿ, ಗದಗ: ಹಂಪಿಯ ಕನ್ನಡ ವಿಶ್ವವಿದ್ಯಾಲಯವು ಸುಜಾತಾ ವಾಲಿಕಾರ ಮಂಡಿಸಿದ ‘ಡಾ. ಚಂದ್ರಶೇಖರ ಕಂಬಾರ ಅವರ ಸಾಹಿತ್ಯದಲ್ಲಿ ಸ್ತ್ರೀ ಸಂವೇದನೆ: ಒಂದು ಅಧ್ಯಯನ’ ಪ್ರಬಂಧಕ್ಕೆ ಪಿಎಚ್.ಡಿ. ಪದವಿಯನ್ನು ನೀಡಿದೆ.
Advertisement
ಗದುಗಿನ ಶ್ರೀ ಜಗದ್ಗುರು ತೋಂಟದಾರ್ಯ ಮಠದ ಮಾನ್ಯತಾ ಕೇಂದ್ರವಾದ ಡಾ. ಎಂ.ಎಂ. ಕಲಬುರ್ಗಿ ಸಂಶೋಧನಾ ಕೇಂದ್ರದ ಮಾರ್ಗದರ್ಶಕರಾದ ಡಾ. ರಾಜಶೇಖರ ಎಸ್.ದಾನರಡ್ಡಿ ಅವರು ಮಾರ್ಗದರ್ಶಕರಾಗಿದ್ದರು. ತೋಂಟದಾರ್ಯ ಮಠದ ಆಡಳಿತಾಧಿಕಾರಿ ಎಸ್.ಎಸ್. ಪಟ್ಟಣಶೆಟ್ಟಿ, ಸಂಯೋಜನಾಧಿಕಾರಿ ಡಾ. ಅರ್ಜುನ ಗೊಳಸಂಗಿ, ಕಾರ್ಯದರ್ಶಿ ಶಿವನಗೌಡ ಗೌಡರ ಸುಜಾತಾರಿಗೆ ಅಭಿನಂದನೆ ಸಲ್ಲಿಸಿದ್ದಾರೆ.