ಬೆಂಗಳೂರು:- ನಗರದ ಹಲವೆಡೆ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ವೀಕೆಂಡ್ ಮೂಡ್ ನಲ್ಲಿದ್ದ ಸಿಟಿ ಮಂದಿ ನಿರಾಸೆಗೊಂಡರು.
ನಗರದಮೆಜೆಸ್ಟಿಕ್, ಕಾರ್ಪೊರೇಷನ್, ಕೆಆರ್ ಮಾರುಕಟ್ಟೆ ಸೇರಿದಂತೆ ಹಲವೆಡೆ ಭಾರೀ ಮಳೆಯಾಗುತ್ತಿದೆ. ಮಳೆ ಅಬ್ಬರಕ್ಕೆ ರಸ್ತೆಗಳ ತುಂಬೆಲ್ಲಾ ನೀರು ಹರಿದು ಹೋಗುತ್ತಿವೆ. ಅಲ್ಲದೇ ಜೋರು ಮಳೆಯಿಂದ ವಾಹನ ಸವಾರರು, ಬೀದಿ ಬದಿ ವ್ಯಾಪಾರಿಗಳು ಪರದಾಡುವ ಸ್ಥಿತಿ ನಿರ್ಮಾಣಗೊಂಡಿದೆ. ಅಷ್ಟೇ ಅಲ್ಲದೇ ವೀಕೆಂಡ್ ಅಂತ ಕುಟುಂಬಸ್ಥರ ಜೊತೆಗೆ ಮನೆಯಿಂದ ಆಚೆ ಬಂದವರು ಪರಾದಾಡುವ ಸ್ಥಿತಿ ನಿರ್ಮಾಣಗೊಂಡಿದೆ.
ಇನ್ನೂ, ವಂದೇ ಭಾರತ್ ರೈಲು ಹಾಗೂ ನಮ್ಮ ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆ ಮಾಡಲು ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮನಿಸಿದ್ದರು. ಲೋಕಾರ್ಪಣೆ ಮುಕ್ತಾಯಗೊಳ್ಳುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿಗೂ ಮಳೆರಾಯ ಕಾಟ ಕೊಟ್ಟಿದ್ದಾನೆ. ಭಾರಿ ಮಳೆಯಿಂದ ರಸ್ತೆ ಮಾರ್ಗವಾಗಿ HAL ಏರ್ಪೋರ್ಟ್ಗೆ ಹೆಲಿಕಾಪ್ಟರ್ ಬದಲು ಕಾರಿನಲ್ಲಿ ಮೋದಿ ಪ್ರಯಾಣ ಮಾಡಿದ್ದರು.