HomePolitics Newsಬಸವರಾಜ ಬೊಮ್ಮಾಯಿಯವರನ್ನು ಬೆಂಬಲಿಸಿ : ಕಳಕಪ್ಪ ಬಂಡಿ

ಬಸವರಾಜ ಬೊಮ್ಮಾಯಿಯವರನ್ನು ಬೆಂಬಲಿಸಿ : ಕಳಕಪ್ಪ ಬಂಡಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ರೋಣ : 3 ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಗಳಾಗಿ ಅನೇಕ ಜನಪರ, ಅಭಿವೃದ್ಧಿಯ ಪರವಾದ ಯೋಜನೆಗಳನ್ನು ಜಾರಿಗೆ ತದು, ರಾಜ್ಯದ ಪ್ರತಿಯೊಬ್ಬ ಜಾತಿ, ಜನಾಂಗಕ್ಕೂ ಸಮಾಜಿಕ ನ್ಯಾಯ ಕಲ್ಪಿಸುವ ಕೆಲಸ ಮಾಡಿದ್ದ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಗೆ ಮತ ನೀಡುವದರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಪಕ್ಷಕ್ಕೆ ಶಕ್ತಿ ತುಂಬಬೇಕು ಎಂದು ಮಾಜಿ ಸಚಿವ ಕಳಕಪ್ಪ ಬಂಡಿ ಮತದಾರರಲ್ಲಿ ಮನವಿ ಮಾಡಿದರು.

ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ಕ್ಷೇತ್ರದ ನೆಲ್ಲೂರ, ಬಳಗೋಡ, ಹೊನ್ನಿಗನೂರು, ತಳ್ಳಿಹಾಳ, ಚಿಕ್ಕ ಅಳಗುಂಡಿ, ಗ್ರಾಮಗಳಲ್ಲಿ ಪ್ರಚಾರ ನಡೆಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಜನವಿರೋಧಿ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಉತ್ತರ ನೀಡುವ ಕಾಲ ಇದೀಗ ಬಂದಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ರೋಣ ಮಂಡಲ ಅಧ್ಯಕ್ಷ ಮುತ್ತಣ್ಣ ಕಡಗದ, ಪ್ರಧಾನ ಕಾರ್ಯದರ್ಶಿ ಉಮೇಶ್ ಮಲ್ಲಾಪುರ್, ಮುಖಂಡರಾದ ಶಿವಾನಂದ ಮಠದ, ಸಿದ್ದಣ್ಣ ಬಳಗೇರ್, ರಾಜನ ಗೌಡ ಗೌಡ್ರು, ಎಂ.ಪಿ. ಪಾಟೀಲ್, ಬಸವರಾಜ್ ದೇಸಾಯಿ, ಸಂಗಪ್ಪ ಲಗುವಗಿ, ರಮೇಶ ವಕ್ಕರ, ಶರಣಪ್ಪ ಪ್ಯಾಟಿ, ಹನುಮಂತ ಲಗಳಿ, ಶಿವಪುತ್ರಪ್ಪ ಇಟಗಿ ಮುಂತಾದವರು ಇದ್ದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!