ವಿಜಯಸಾಕ್ಷಿ ಸುದ್ದಿ, ಗದಗ : ಯುವಕರೆಲ್ಲರೂ ದೇಶದ ಉಳಿವಿಗಾಗಿ, ಬಡತನದ ನಿರ್ಮೂಲನೆಗಾಗಿ, ಉದ್ಯೋಗ ಸೃಷ್ಟಿಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರಿಗೆ ಅತ್ಯಧಿಕ ಮತಗಳನ್ನು ನೀಡಿ ದೆಹಲಿಗೆ ಕಳುಹಿಸಬೇಕು ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಹೇಳಿದರು.
ನಗರದ ಕೆ.ಎಚ್. ಪಾಟೀಲ ಸಭಾಭವನದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ `ಯುವ ಚೈತನ್ಯ’ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಾಜಿ ಶಾಸಕ ಡಿ.ಆರ್. ಪಾಟೀಲ ಮಾತನಾಡಿ, ಮೇ 7ರಂದು ನಡೆಯುವ ರಾಜ್ಯದ 14 ಕ್ಷೇತ್ರಗಳ ಚುನಾವಣೆಯಲ್ಲಿ 10ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಆನಂದಸ್ವಾಮಿ ಗಡ್ಡದೇವರಮಠರ ಗೆಲುವಿಗಾಗಿ ಯುವಕರು ಮನೆಮನೆಗಳಿಗೆ ತೆರಳಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ಹಾಕಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ, ರೋಣ ಶಾಸಕ ಜಿ.ಎಸ್. ಪಾಟೀಲ ಮಾತನಾಡಿ, ಎಚ್.ಕೆ. ಪಾಟೀಲ ಅವರ ಸಾರಥ್ಯದಲ್ಲಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ನಡೆಯುತ್ತಿದ್ದು, ಆನಂದಸ್ವಾಮಿ ಗಡ್ಡದೇವರಮಠ ಅವರು ಗೆಲ್ಲಬೇಕು. ಕಾರ್ಯಕರ್ತರು ಎಚ್ಚರ ವಹಿಸಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು ಎಂದು ಮನವಿ ಮಾಡಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ರಾಜ್ಯ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಹಮ್ಮದ್ ನಲಪಾಡ್, ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಕೃಷ್ಣಗೌಡ ಎಚ್.ಪಾಟೀಲ ಮಾತನಾಡಿ, ನಿರುದ್ಯೋಗ, ಬಡತನ ಸಮಸ್ಯೆ ನಿವಾರಿಸಲು ಪ್ರತಿಯೊಬ್ಬರೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ, ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ನೀಲಮ್ಮ ಬೋಳನವರ, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ, ಜಿಪಂ ಮಾಜಿ ಅಧ್ಯಕ್ಷ ಸಿದ್ದು ಪಾಟೀಲ, ಗದಗ-ಬೆಟಗೇರಿ ನಗರಸಭೆ ಮಾಜಿ ಅಧ್ಯಕ್ಷರಾದ ಬಿ.ಬಿ. ಅಸೂಟಿ, ಪೀರಸಾಬ್ ಕೌತಾಳ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಎಐಸಿಸಿ ಕಾರ್ಯದರ್ಶಿ ವಿವೇಕ ಯಾವಗಲ್, ನಗರಸಭೆ ಸದಸ್ಯರು ಹಾಗೂ ಮುಖಂಡರು, ಕಾರ್ಯಕರ್ತರು ಇದ್ದರು.
ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ ಸ್ವಾಗತಿಸಿದರು. ಬಾಹುಬಲಿ ಜೈನರ ನಿರೂಪಿಸಿದರು.
ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಮಾತನಾಡಿ, ಜಿಲ್ಲಾ ಯುವ ಕಾಂಗ್ರೆಸ್ನಿಂದ ಬೆಳೆದ ಯುವಕರು ರಾಷ್ಟçಮಟ್ಟದ ನಾಯಕರಾಗಿ ಹೊರಹೊಮ್ಮಿದ್ದಾರೆ. ಭವಿಷ್ಯವನ್ನು ರೂಪಿಸಿಕೊಳ್ಳಲು ಯುವಕರಿಗೆ ಅವಕಾಶ ಮಾಡಿಕೊಡುವ ಏಕೈಕ ಪಕ್ಷ ಕಾಂಗ್ರೆಸ್ ಆಗಿದೆ ಎಂದರು.
ರಾಜಕಾರಣ ಎಂದರೆ ಮೋಜು, ಮಜಾ ಮಾಡುವುದಲ್ಲ್ಲ. ಜನರ ಸೇವೆ ಮಾಡಲು ರಾಜಕಾರಣ ಒಂದು ಅಸ್ತçವಾಗಿದ್ದು, ಅದನ್ನು ಸರಿಯಾಗಿ ಬಳಸಿಕೊಳ್ಳಬೇಕು. ಯುವಕರ ಹುರುಪು, ಉತ್ಸಾಹ ನೋಡಿ ನಮ್ಮಲ್ಲಿ ಸಂತೋಷ ಹೆಚ್ಚಿಸಿದೆ. ಯುವಕರ ಉತ್ಸಾಹ, ಆಸಕ್ತಿ ಸದಾವಕಾಲ ಹೀಗೆಯೇ ಇರಬೇಕು. ಅಂದಾಗ ಮಾತ್ರ ನಿಮಗೆ ಉಜ್ವಲ ಭವಿಷ್ಯ ದೊರೆಯಲಿದೆ.
– ಎಚ್.ಕೆ. ಪಾಟೀಲ.
ಜಿಲ್ಲಾ ಉಸ್ತುವಾರಿ ಸಚಿವರು.