HomeGadag Newsವಿದ್ಯಾರ್ಥಿಗಳ ಯಶಸ್ವಿ ಅಭ್ಯಾಸಕ್ಕೆ ಬೆಂಬಲ : ಭರಮಪ್ಪ ಬಡಪ್ಳವರ

ವಿದ್ಯಾರ್ಥಿಗಳ ಯಶಸ್ವಿ ಅಭ್ಯಾಸಕ್ಕೆ ಬೆಂಬಲ : ಭರಮಪ್ಪ ಬಡಪ್ಳವರ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ : ಜೀವನದಲ್ಲಿ ಉತ್ತಮ ಇಂಜಿನಿಯರ್ ಆಗಲು ಅವಕಾಶ ದೊರಕಿದ್ದು, ಉದ್ಯೋಗ ದೊರಕಿಸಿಕೊಳ್ಳಲು ಡಿಪ್ಲೋಮಾ ವ್ಯಾಸಂಗವು ಉಪಯುಕ್ತವಾಗಿದೆ ಎಂದು ಪ್ರಾಚಾರ್ಯ ಭರಮಪ್ಪ ಬಡಪ್ಳವರ ಹೇಳಿದರು.

ನಗರದ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಮಂಗಳವಾರ 2024-25ನೇ ಸಾಲಿನ ವಿದ್ಯಾರ್ಥಿ ಸಂಘ, ಕ್ರೀಡಾ ಸಂಘ, ಯುವ ರೆಡ್‌ಕ್ರಾಸ್ ಘಟಕ ಹಾಗೂ ಎನ್.ಎಸ್.ಎಸ್. ಚಟುವಟಿಕೆಗಳ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಿಗೆ ಸಂಸ್ಥೆಯಲ್ಲಿ ಗುಣಮಟ್ಟದ ತಾಂತ್ರಿಕ ಶಿಕ್ಷಣ ನೀಡಲು ಕಾಲೇಜಿನ ಆಡಳಿತ ಹಾಗೂ ಎಲ್ಲ ಬೋಧಕ ಸಿಬ್ಬಂದಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದು, ವಿದ್ಯಾರ್ಥಿಗಳ ಯಶಸ್ವಿ ಅಭ್ಯಾಸಕ್ಕೆ ಎಲ್ಲ ರೀತಿಯ ಬೆಂಬಲ ನೀಡುವುದಾಗಿ ತಿಳಿಸಿದರು.

ಸಬ್ ಇನ್ಸ್ಪೆಕ್ಟರ್ ಲಕ್ಷ್ಮಣ ಎಮ್.ಆರಿ ಮಾತನಾಡಿ, ವಿದ್ಯಾರ್ಥಿಗಳು ಕಷ್ಟಪಟ್ಟು ವಿದ್ಯಾಭ್ಯಾಸ ಮಾಡಿ ಸ್ಪರ್ಧಾತ್ಮಕವಾಗಿ ಸಾಧನೆ ಮಾಡಿ ಜೀವನದಲ್ಲಿ ಮುಂದೆ ಬರಲು ಕರೆ ನೀಡಿದರು.

ಸಂಜೀವಕುಮಾರ ಬಿ.ಕಣಗಿನಹಾಳ ಮಾತನಾಡಿ, ನಾನು ಸಹ ನಿಮ್ಮ ಹಾಗೆ ಡಿಪ್ಲೋಮಾ ಅಭ್ಯಾಸ ಮಾಡಿ ಈಗ ಸ್ವಂತ ಉದ್ದಿಮೆ ಪ್ರಾರಂಭಿಸಿದ್ದೇನೆ. ವಿದ್ಯಾರ್ಥಿಗಳಿಗೆ ಡಿಪ್ಲೋಮಾ ಅಭ್ಯಾಸದ ನಂತರ ಸ್ವಂತ ಉದ್ದಿಮೆ ಮಾಡಲು ಸಾಕಷ್ಟು ಅವಕಾಶಗಳಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ಉದ್ಯಮಿಯಾಗಲು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಜೈನಾಬಿ, ಕೊಟ್ರಗೌಡ, ಶಿವಾನಂದ ಪೂಜಾರ, ಮಂಗಳಗೌರಮ್ಮ ಶಿವಸಿಂಪಿಗೇರ, ಕಛೇರಿ ಅಧೀಕ್ಷಕರುಗಳಾದ ವೀರೇಶ ಕಂಠಿಮಠ, ರಮೇಶ ಮಾವಿನಕಾಯಿ, ಸಮಸ್ತ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಚಂದ್ರು ರಾಮಗೇರಿ, ಯಶವಂತ ಬಗಾಡೆ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img