ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಎ2 ಆರೋಪಿಯಾಗಿದ್ದಾರೆ. ಮಧ್ಯಂತರ ಜಾಮೀನು ಪಡೆದು ಜೈಲಿಂದ ಹೊರಗೆ ಬಂದಿರುವ ದರ್ಶನ್ ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂದೂವರೆ ತಿಂಗಳು ಮಧ್ಯಂತರ ಜಾಮೀನು ನೀಡಲಾಗಿತ್ತು. ಆದರೆ ಇದುವರೆಗೂ ಶಸ್ತ್ರ ಚಿಕಿತ್ಸೆ ನಡೆದಿಲ್ಲ. ನಾಳೆ ಅಂದರೆ ಡಿ.11ರಂದು ಮಧ್ಯಂತರ ಜಾಮೀನು ಮುಗಿಯಲಿದ್ದು ಇದೀಗ ಅಂದೇ ದರ್ಶನ್ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳಲು ಮುಂದಾಗಿದ್ದಾರೆ.
ದರ್ಶನ್ ಪರ ವಕೀಲರಾದ ಸಿವಿ ನಾಗೇಶ್ ಹಾಗೂ ಎಪಿಪಿ ಪ್ರಸನ್ನ ಕುಮಾರ್ ಸುದೀರ್ಘ ವಾದ ಪ್ರತಿವಾದ ನಡೆಸಿದರು. ಇಬ್ಬರ ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು ದಿನಾಂಕ ಘೋಷಿಸದೆ ತೀರ್ಪು ಕಾಯ್ದಿರಿಸಿದ್ದಾರೆ. ಜೊತೆಗೆ ಆದೇಶ ಬರುವವರೆಗೂ ನಟ ದರ್ಶನ್ ಮೆಡಿಕಲ್ ಜಾಮೀನು ಅವಧಿ ಕೂಡ ಮುಂದುವರಿಕೆ ಆಗಲಿದೆ ಎಂದಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಹೈ ಕೋರ್ಟ್ ಕೈಗೆತ್ತಿಕೊಂಡಿತ್ತು. ದರ್ಶನ್ ಪರ-ವಿರುದ್ಧ ವಕೀಲರು ವಾದ ಮಂಡಿಸಿದ್ರು. ಸುದೀರ್ಘ ವಾದ ಆಲಿಸಿದ ನ್ಯಾಯಧೀಶರು ತೀರ್ಪು ಕಾಯ್ದಿರಿಸಿದ್ದಾರೆ. ದಿನಾಂಕ ನಿಗದಿ ಮಾಡದೆ ತೀರ್ಪು ಕಾಯ್ದಿರಿಸಿ ಆದೇಶ ಹೊರಡಿಸಿದ್ದಾರೆ.
ಡಿಸೆಂಬರ್ 11ಕ್ಕೆ ದರ್ಶನ್ ಅವರ ಶಸ್ತ್ರ ಚಿಕಿತ್ಸೆಗೆ ದಿನಾಂಕ ನಿಗದಿ ಆಗಿದೆ. ಈ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಲಾಗಿದೆ. ಆದ್ದರಿಂದ ಅವರ ಜಾಮೀನು ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ರೆಗ್ಯುಲರ್ ಬೇಲ್ ವಿಚಾರಣೆಯ ವಾದ-ಪ್ರತಿವಾದ ಮುಗಿದಿದೆ. ಆದೇಶವನ್ನು ಹೈಕೋರ್ಟ್ ಕಾಯ್ದಿರಿಸಿದೆ. ಆದೇಶ ಬರುವ ತನಕ ದರ್ಶನ್ ಅವರ ಮಧ್ಯಂತರ ಜಾಮೀನು ಅವಧಿ ಮುಂದುವರಿಯಲಿದೆ. ದರ್ಶನ್ ಅವರಿಗೆ ಜಾಮೀನು ನೀಡುವಾಗ ಕೆಲವು ಷರತ್ತುಗಳನ್ನು ಹಾಕಲಾಗಿತ್ತು. ಆದರೆ ಆ ಷರತ್ತುಗಳು ಯಾವುವು ಎಂಬುದನ್ನು ಮಾತ್ರ ರಿವೀಲ್ ಮಾಡಿಲ್ಲ.