ಆನೇಕಲ್: ಅನೈತಿಕ ಸಂಬಂಧ ಶಂಕೆಯಿಂದ ಗಂಡನೊಬ್ಬ ದೊಣ್ಣೆಯಿಂದ ಹೊಡೆದು ಪತ್ನಿಯನ್ನು ಕೊಲೆ ಮಾಡಿದ ಘಟನೆ ಆನೇಕಲ್ ತಾಲ್ಲೂಕಿನ ರಾಚಾಮಾನ ಹಳ್ಳಿ ಗ್ರಾಮದಲ್ಲಿ ನಡೆದಿದೆ. ರಾಜಮಾನ ಹಳ್ಳಿ ಗ್ರಾಮದ ಅನಿತಾ ಮೃತ ಗೃಹಿಣಿಯಾಗಿದ್ದು, ಬಾಬು ಕೊಲೆ ಮಾಡಿರುವ ಆರೋಪಿಯಾಗಿದ್ದಾನೆ.
ಆನೇಕಲ್ ತಾಲ್ಲೂಕಿನ ರಾಚಮಾನಹಳ್ಳಿ ಗ್ರಾಮದ ವಾಸಿಯಾಗಿರುವ ಬಾಬು ಮೈಸೂರಿನ ಚಿಕ್ಕ ಮಾರ್ಕೆಟ್ ಏರಿಯಾದವರಾದ ಅನಿತಾಳನ್ನು 7 ವರ್ಷಗಳ ಹಿಂದೆ ಮದುವೆಯಾಗಿದ್ದನು. ಅನಿತ ಬಾಬು ಗೆ ಒಂದು ಗಂಡು ಹಾಗೂ ಒಂದು ಹೆಣ್ಣು ಮಗುವಿದೆ. ಈ ಹಿಂದೆ ಅನಿತಾ ಗಂಡನ ಜೊತೆ ಜಗಳ ಮಾಡಿಕೊಂಡು ಒಂದು ತಿಂಗಳು ಮನೆ ಬಿಟ್ಟು ಹೋಗಿದ್ದಳು.
ಕಳೆದ ವಾರ ಬಾಬು ಕುಟುಂಬಸ್ಥರು ವಾಪಾಸ್ ಕರೆದುಕೊಂಡು ಬಂದಿದ್ದರು. ಇದೆ ವಿಚಾರ ವಾಗಿ ಪದೇ ಪದೇ ಜಗಳವಾಡುತ್ತಿದ್ದರು. ನಿನ್ನೆ ಜಗಳವಾದಾಗ ಹೆಂಡತಿ ಹೊಡೆದಿದ್ದನು. ರಾತ್ರಿ ಮಲಗಿ ಬೆಳಗ್ಗೆ ಏಳುವಷ್ಟರಲ್ಲಿ ಅನಿತಾ ಸಾವನ್ನಪ್ಪಿದ್ದಾಳೆ. ಅತ್ತಿಬೆಲೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದು, ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.