ಆರು ತಿಂಗಳ ಕಾಲ ಶಾಸಕರನ್ನು ಅಮಾನತು ಕಾನೂನು ಬಾಹಿರವಾಗಿದೆ: ಬಿ ವೈ ವಿಜಯೇಂದ್ರ

0
Spread the love

ಬೆಂಗಳೂರು: ಆರು ತಿಂಗಳ ಕಾಲ ಶಾಸಕರನ್ನು ಅಮಾನತು ಕಾನೂನು ಬಾಹಿರವಾಗಿದೆ ಎಂದು ಸ್ಪೀಕರ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಇದು ಅಸಂವಿಧಾನತ್ಮಕ, ಏಕಪಕ್ಷೀಯ ಹಾಗೂ ಮನಸೋ ಇಚ್ಚೆಯಿಂದ ತೆಗೆದುಕೊಂಡ ನಿರ್ಧಾರವಾಗಿದೆ.

Advertisement

ಯಾವ ಕಾರಣಕ್ಕೋಸ್ಕರ ಸ್ಪೀಕರ್ ಅಮಾನತು ಮಾಡುವ‌ ನಿರ್ಧಾರ ಮಾಡಿದ್ರು ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಪ್ರಶ್ನೆ ಮಾಡಿದ್ದಾರೆ. ಇನ್ನೂ ರಾಜ್ಯದಲ್ಲಿರುವ ಮುಸಲ್ಮಾನರಿಗೆ ಸರ್ಕಾರಿ ಕಾಮಗಾರಿಗಳಲ್ಲಿ ಮೀಸಲಾತಿ ಕೊಡುವ ನಿರ್ಣಯ ಮಾಡಿದ್ದಾರೆ.

ಜೊತೆಗೆ ಅಲ್ಪಸಂಖ್ಯಾತರಿಗೂ ಬಜೆಟ್ ನಲ್ಲೂ ಘೋಷಣೆ ಮಾಡಿದ್ದಾರೆ. ಇದರ ಬಗ್ಗೆ ಬಿಜೆಪಿ-ಜೆಡಿಎಸ್ ಸದನದಲ್ಲಿ ಹೋರಾಟ ಮಾಡಿದ್ವಿ. ಆದ್ರೆ ಶಾಸಕರು ಪ್ರತಿಭಟನೆ ಮಾಡುವಾಗ ಅಮಾನತು ಮಾಡಿರೋದು ಸಂವಿಧಾನ ಬಾಹಿರ ಎಂದು ವಿಜಯೇಂದ್ರ ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here