ದಾವಣಗೆರೆ:– ಅನೈತಿಕ ಸಂಬಂಧ ಹೊಂದಿದ್ದಾಳೆಂದು ಅನುಮಾನಿಸಿದ ಗಂಡನೊಬ್ಬ ತನ್ನ ಹೆಂಡತಿಯ ಕತ್ತು ಕೊಯ್ದು ಕೊಲೆ ಮಾಡಿದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಗೌರಿಪುರ ಗ್ರಾಮದಲ್ಲಿ ಜರುಗಿದೆ.
ಗೌರಿಪುರ ಗ್ರಾಮದ ನಾಗಮ್ಮ ಕೊಲೆಯಾದ ಮೃತ ಮಹಿಳೆ ಎನ್ನಲಾಗಿದೆ. ಇವರು ಸಂತೆಮುದ್ದಾಪುರ ಗ್ರಾಮದಲ್ಲಿ ಸರ್ಕಾರಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.
ಪತ್ನಿ ಕೊಲೆ ಮಾಡಿದ ನಂತರ ಪತಿ ಸತ್ಯಪ್ಪ ಡೆತ್ ನೋಟ್ ಬರೆದಿಟ್ಟು ನನ್ನ ಸಾವಿಗೆ ನಾನೇ ಕಾರಣ ಎಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ಸ್ಥಳೀಯರು ಸತ್ಯಪ್ಪ ನನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಅನ್ಯರೊಂದಿಗೆ ಅನೈತಿಕ ಸಂಬಂಧ ವಿಟ್ಟುಕೊಂಡಿದ್ದಾಳೆಂದು ಸತ್ಯಪ್ಪ ತನ್ನ ಹೆಂಡತಿಯನ್ನೇ ಶಂಕಿಸಿದ್ದ. ಹೀಗಾಗಿ ರಾತ್ರಿ ಮಲಗಿದ್ದ ವೇಳೆ ಚಾಕುವಿನಿಂದ ಕುತ್ತಿಗೆ ಕುಯ್ದು ಕೊಲೆ ಮಾಡಿ ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸ್ಥಳೀಯರ ಸಮಯ ಪ್ರಜ್ಞೆಯಿಂದ ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಜಗಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.