ವಿಜಯಸಾಕ್ಷಿ ಸುದ್ದಿ, ಗದಗ : ಸಮೀಪದ ಅಡವಿಸೋಮಾಪೂರ ಸಣ್ಣ ತಾಂಡೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮದ ಶಿಕ್ಷಣ ಪ್ರೇಮಿಗಳಾದ ಕೃಷ್ಣ ಸಕ್ರಪ್ಪ ಲಮಾಣಿ, ಸಕ್ಕುಬಾಯಿ ಕೃಷ್ಣ ಲಮಾಣಿ ಇವರು ಫಿನ್ಲ್ಯಾಂಡ್ ದೇಶಕ್ಕೆ ಪ್ರವಾಸ ಕೈಗೊಳ್ಳುತ್ತಿರುವ ನಿಮಿತ್ತ ಶಾಲಾ ಮಕ್ಕಳಿಗೆ ಬಿಸಿಯೂಟಯೊಂದಿಗೆ ಸಿಹಿ ವಿತರಿಸಲಾಯಿತು.
Advertisement
ಶಾಲೆ ಮುಖ್ಯ ಶಿಕ್ಷಕ ಮಲ್ಲೇಶ ಡಿ.ಎಚ್, ಶಿಕ್ಷಕರಾದ ಎಸ್.ಜಿ. ಅಮ್ಮಿನಭಾವಿ, ಎಸ್.ಟಿ. ಹಳಕಟ್ಟಿ, ಪಿ.ಬಿ. ಕಿಲಬನವರ, ಎಸ್ಡಿಎಂಸಿ ಅಧ್ಯಕ್ಷ ಮಾರುತಿ ಪವಾರ, ಬಿಸಿಯೂಟ ಸಿಬ್ಬಂದಿಗಳಾದ ಗಂಗವ್ವ ಲಮಾಣಿ, ಸಾವಿತ್ರಿ ರಾಠೋಡ, ದೇವಕ್ಕ ಲಮಾಣಿ, ಲಕ್ಷ್ಮಿ ಲಮಾಣಿ, ಶಾಂತವ್ವ ಹಾಗೂ ವಿದ್ಯಾರ್ಥಿಗಳಿದ್ದರು.