HomeGadag Newsಜಿಲ್ಲಾ ಕ್ರೀಡಾಂಗಣದ ಸ್ವಚ್ಛತೆಗೆ ಕ್ರಮ ವಹಿಸಿ

ಜಿಲ್ಲಾ ಕ್ರೀಡಾಂಗಣದ ಸ್ವಚ್ಛತೆಗೆ ಕ್ರಮ ವಹಿಸಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲಾ ಮಟ್ಟದಲ್ಲಿ ಆಗಸ್ಟ್ 15ರಂದು ಜರುಗುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಜಿಲ್ಲಾ ಕ್ರೀಡಾಂಗಣದಲ್ಲಿ ವ್ಯವಸ್ಥಿತವಾಗಿ ಜರುಗುವಂತೆ ಸಂಬಂಧಿತ ಇಲಾಖಾಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್ ತಿಳಿಸಿದರು.

ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣಕ್ಕೆ ಮಂಗಳವಾರ ಭೇಟಿ ನೀಡಿದ ಅವರು ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ವೇದಿಕೆ ಹಾಗೂ ಇತರೆ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಿ ಸಂಬAಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲರು ಆ.15ರಂದು ಬೆಳಿಗ್ಗೆ 9 ಗಂಟೆಗೆ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವದ ಸಂದೇಶ ನೀಡುವರು. ಬೆಳಿಗ್ಗೆ 8.30ರೊಳಗಾಗಿ ವಿವಿಧ ಇಲಾಖಾ ಅಧಿಕಾರಿಗಳು ತಮ್ಮ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಕ್ರೀಡಾಂಗಣದಲ್ಲಿ ತಮ್ಮ ಇಲಾಖಾ ಸಿಬ್ಬಂದಿಗಳೊಂದಿಗೆ ಹಾಜರಿರಬೇಕು. ಅಲ್ಲದೇ ಶಾಲಾ-ಕಾಲೇಜುಗಳಲ್ಲಿಯೂ ಮಕ್ಕಳು ಧ್ವಜಾರೋಹಣ ನೆರವೇರಿಸಿ 8.30ರೊಳಗಾಗಿ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸಿ ನಿಗದಿಪಡಿಸಿದ ಸ್ಥಳದಲ್ಲಿ ಆಸೀನರಾಗಬೇಕು. ಈ ಕುರಿತು ಶಾಲಾ ಶಿಕ್ಷಕರು ಶಿಕ್ಷಣ ಇಲಾಖೆ ಅಧಿಕಾರಿಗಳು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಆ. 15ಕ್ಕೂ ಮೊದಲು ಮೂರು ದಿನ ಮುಂಚಿತವಾಗಿಯೇ ನಗರಸಭೆಯ ಅಧಿಕಾರಿಗಳು ನಗರದ ಪ್ರಮುಖ ವೃತ್ತಗಳ ಸ್ವಚ್ಛತೆಗೆ ಹಾಗೂ ಜಿಲ್ಲಾ ಕ್ರೀಡಾಂಗಣದ ಸ್ವಚ್ಛತೆಗೆ ಆದ್ಯತೆ ವಹಿಸಬೇಕು. ಪ್ರಮುಖ ವೃತ್ತಗಳಲ್ಲಿ ಮುಂಚಿತವಾಗಿಯೇ ದೀಪಾಲಂಕಾರ ಮಾಡಬೇಕು ಎಂದು ಸೂಚಿಸಿದರು.

ವೇದಿಕೆಯಲ್ಲಿ ಶಿಷ್ಟಾಚಾರದಂತೆ ಕಾರ್ಯಕ್ರಮ ನಿರ್ವಹಣೆಯಾಗಬೇಕು. ಸೂಕ್ತ ಧ್ವನಿವರ್ಧಕದ ವ್ಯವಸ್ಥೆ ಮಾಡಬೇಕು. ಮಕ್ಕಳಿಗೆ ಅಲ್ಲಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಪ್ರತಿ ಕಾರ್ಯಕ್ರಮಗಳೂ ನಿಗದಿಪಡಿಸಿದ ಸಮಯಕ್ಕೆ ಜರುಗುವಂತೆ ನಿಗಾ ವಹಿಸಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಪ.ಪೂ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಬಿ. ಮಸನಾಯಕ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರುಡಿ, ಜಿಲ್ಲಾ ಉಪಸಮನ್ವಯಾಧಿಕಾರಿ ಎಮ್.ಎಚ್. ಕಂಬ್ಳಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ವಿ.ವಿ. ನಡುವಿನಮನಿ, ಶೆಟ್ಟೆಪ್ಪನವರ, ತಹಸೀಲ್ದಾರ ಶ್ರೀನಿವಾಸ ಮೂರ್ತಿ ಕುಲಕರ್ಣಿ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಶರಣು ಗೋಗೇರಿ, ವಾರ್ತಾಧಿಕಾರಿ ವಸಂತ ಮಡ್ಲೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ರಾಜಕುಮಾರ್ ಸೋಪಡ್ಲಾ, ಕಂದಾಯ ನಿರೀಕ್ಷಕ ಭಜಂತ್ರಿ ಸೇರಿದಂತೆ ಇತರರು ಹಾಜರಿದ್ದರು.

ಶಾಲಾ ಶಿಕ್ಷಣ ಇಲಾಖೆ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳು ನಗರ ವ್ಯಾಪ್ತಿಯ ಶಾಲಾ-ಕಾಲೇಜು ವಿದ್ಯಾರ್ಥಿಗಳನ್ನು ನಿಗದಿತ ಸಮಯದೊಳಗೆ ಕರೆತರುವ ವ್ಯವಸ್ಥೆ ಮಾಡಬೇಕು. ಈ ಕುರಿತಂತೆ ತಮ್ಮ ಇಲಾಖಾ ವ್ಯಾಪ್ತಿಯ ಅಧಿಕಾರಿ ಹಾಗೂ ಶಿಕ್ಷಕರುಗಳಿಗೆ ಹೊಣೆಗಾರಿಕೆ ನೀಡಬೇಕು. ಕಾರ್ಯಕ್ರಮ ಪೂರ್ಣಗೊಳ್ಳುವವರೆಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳು ತೆರಳದಂತೆ ನಿಗಾ ವಹಿಸಬೇಕು ಎಂದು ಡಾ. ದುರಗೇಶ್ ಕೆ.ಆರ್ ತಿಳಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!