ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲಾ ನಿಜಶರಣ ಅಂಬಿಗರ ಚೌಡಯ್ಯ ಸಮಾಜ ಟ್ರಸ್ಟ್ ವತಿಯಿಂದ ಅಂಬಿಗ, ಗಂಗಾಮತ, ಬೆಸ್ತರ್, ಬಾರಕೇರ, ಸುಣಗಾರ ಸಮುದಾಯದ ವಿದ್ಯಾರ್ಥಿಗಳಿಗೆ ಉಚಿತ ನೋಟ್ಬುಕ್ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಮುಖ್ಯ ಅತಿಥಿಗಳಾಗಿ ಸಾಮಾಜಿಕ ಕಾರ್ಯಕರ್ತೆ, ಸಮುದಾಯದ ಚಿಂತಕರಾದ ಅಂಬಿಕಾ ಜಾಲಗಾರ ಪಾಲ್ಗೊಂಡು ಮಾತನಾಡಿ, ಮಕ್ಕಳ ಶಿಕ್ಷಣಕ್ಕೆ ಸಹಕಾರ ನೀಡುತ್ತಾ ಪ್ರತಿವರ್ಷ ವಿದ್ಯಾರ್ಥಿಗಳಿಗೆ ನೋಟ್ಬುಕ್ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡುತ್ತಿರುವ ಸಮಾಜ ಟ್ರಸ್ಟಿನ ಕಾರ್ಯ ವೈಖರಿ ಶ್ಲಾಘನೀಯ ಎಂದರು.
ಅಂತಾರಾಷ್ಟ್ರೀಯ ಓಲಂಪಿಕ್ ಕ್ರೀಡಾಪಟು ಹಾಗೂ ಸಮುದಾಯದ ಹಿರಿಯರಾದ ಬಿ. ಸುಣಗಾರ ನೋಟ್ಬುಕ್ ವಿತರಿಸಿ ಮಾತನಾಡಿ, ವಿದ್ಯಾರ್ಥಿಗಳು ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡಿ, ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಿ ಎಂದರು.
ಸಮಾಜದ ಪ್ರಧಾನ ಕಾರ್ಯದರ್ಶಿ ಸಂಗಮೇಶ ಹಾದಿಮನಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸಭೆಯ ಅಧ್ಯಕ್ಷತೆಯನ್ನು ಸಮಾಜದ ಜಿಲ್ಲಾಧ್ಯಕ್ಷ ರಾಮಣ್ಣ ಇರಕಲ್ಲ ವಹಿಸಿದ್ದರು. ಸಂದರ್ಭದಲ್ಲಿ ಗದಗ ಜಿಲ್ಲೆಯ ಕೆಪಿಸಿಸಿ ಮೀನುಗಾರರ ವಿಭಾಗದ ಜಿಲ್ಲಾಧ್ಯಕ್ಷ ಗುರಪ್ಪ ತಿರ್ಲಾಪುರ, ಸಮಾಜದ ಉಪಾಧ್ಯಕ್ಷ ಪ್ರವೀಣ ನೀಲಣ್ಣವರ, ಅಮಿತ ಪೂಜಾರ, ಹರೀಶ ಬಾರಕೇರ, ಸುಜಾತ ಗುಡಿಸಾಗರ, ಸೌಮ್ಯ ಸುಣಗಾರ, ಕವಿತಾ ಗುಡಿಸಾಗರ, ಚಂದ್ರಶೇಖರ ಬಾರಕೇರ, ಸಮಾಜ ಭಾಂದವರು ಉಪಸ್ಥಿತರಿದ್ದರು.