HomeGadag Newsಬಂಜಾರ ಸಮುದಾಯದಿಂದ `ತಮಟೆ ಚಳುವಳಿ’

ಬಂಜಾರ ಸಮುದಾಯದಿಂದ `ತಮಟೆ ಚಳುವಳಿ’

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಪರಿಶಿಷ್ಟ ಜಾತಿಗಳಲ್ಲಿನ ಅವೈಜ್ಞಾನಿಕ ಒಳಮೀಸಲಾತಿ ವರ್ಗೀಕರಣದ ವಿರುದ್ಧವಾಗಿ ಕರ್ನಾಟಕ ಬಂಜಾರ ಹಕ್ಕು ಸಂರಕ್ಷಣಾ ಸಮಿತಿ ಹಾಗೂ ಜಿಲ್ಲಾ ಬಂಜಾರ ಸಮುದಾಯದ ವಿವಿಧ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ, ನಗರದ ಗಾಂಧಿ ವೃತ್ತದಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆ ಮತ್ತು ಅನಿರ್ದಿಷ್ಟಾವಧಿಯ ಅಹೋರಾತ್ರಿ ಧರಣಿ ಶನಿವಾರವೂ ಮುಂದುವರೆದಿದೆ.

ಈ ಹೋರಾಟದಲ್ಲಿ ಜಿಲ್ಲೆಯ ವಿವಿಧ ತಾಂಡಾಗಳ ಸಾವಿರಾರು ಜನರು ಭಾಗವಹಿಸಿ, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ಶನಿವಾರ ಗದಗ ಜಿಲ್ಲೆಯ 72 ತಾಂಡಾಗಳ ಪೈಕಿ ತಮ್ಮ ವೇಳಾಪಟ್ಟಿಯಂತೆ ಕಬಲಾಯತ್ ಕಟ್ಟಿ, ಹಮ್ಮಿಗಿ, ಮಜ್ಜೂರ, ಅಕ್ಕಿಗುಂದ, ಉಳ್ಳಟ್ಟಿ, ಬೆಣಸಮಟ್ಟಿ, ಗೌಡಗೇರಿ ತಾಂಡಾಗಳ ಬಂಜಾರರು ಬೆಳಿಗ್ಗೆ 11 ಗಂಟೆಗೆ ಗದಗ ನಗರದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಿಂದ ಸರ್ಕಾರದ ವಿರುದ್ಧ ತಮಟೆ ಚಳುವಳಿ ಮೂಲಕ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸಿದರು.
ಪ್ರತಿಭಟನಾಕಾರರು ತಮಟೆ, ನಗಾರಿ ಮುಂತಾದ ವಾದ್ಯಗಳನ್ನು ರಸ್ತೆಯುದ್ದಕ್ಕೂ ಬಾರಿಸುತ್ತಾ ಸರ್ಕಾರದ ಅವೈಜ್ಞಾನಿಕ ಒಳಮೀಸಲಾತಿ ನಿರ್ಧಾರವನ್ನು ಕೂಡಲೇ ಕೈಬಿಡಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕೆ.ಸಿ. ನಭಾಪುರ, ಎನ್.ಟಿ. ಪೂಜಾರ, ಪರಮೇಶ ನಾಯಕ್, ಚಂದು ನಾಯಕ್, ಧನಸಿಂಗ್ ನಾಯಕ್, ಈಶ್ವರ್ ನಾಯಕ್, ಐ.ಎಸ್. ಪೂಜಾರ್, ಟಿ.ಡಿ. ಪೂಜಾರ್, ಮಜ್ಜುರ್ ತಾಂಡೆ ಆನಂದ ನಾಯಕ್, ಶಿವಪ್ಪ ಲಮಾಣಿ, ಚನ್ನಪ್ಪ ಕಾರಬಾರಿ, ವಸಂತ್ ಲಮಾಣಿ, ವೆಂಕಪ್ಪ ಲಮಾಣಿ, ಬಾಲು ಲಮಾಣಿ, ಕೃಷ್ಣ ಲಮಾಣಿ, ಭೀಮಪ್ಪ ಪೂಜಾರಿ, ರಾಜೇಶ್ ಲಮಾಣಿ, ಧನ್ಯಪ್ಪ ಲಮಾಣಿ, ಸುರೇಶ್ ಲಮಾಣಿ, ಬಾಪೂಜಿ ಲಮಾಣಿ, ಕಬಲಾಯತ್ ಕಟ್ಟಿ, ನೂರಪ್ಪ ನಾಯಕ್, ರಾಮಪ್ಪ ದೊಡ್ಮನಿ, ಕೇಶಪ್ಪಾ ಲಮಾಣಿ, ಧರಮಪ್ಪ ಲಮಾಣಿ, ಥಾಕುರ್ ಲಮಾಣಿ, ಅಕ್ಕಿಗುಂದ ತಾಂಡಾದ ವೆಂಕಪ್ಪ ಕಾರಬಾರಿ ಸಕ್ರಪ್ಪ ನಾಯಕ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಅವೈಜ್ಞಾನಿಕ ಒಳಮೀಸಲಾತಿ ವರ್ಗೀಕರಣವನ್ನು ಸರ್ಕಾರ ಈ ಕೂಡಲೇ ತಡೆ ಹಿಡಿದು ನಮ್ಮ ಬಂಜಾರ ಸಮುದಾಯಕ್ಕೆ ನ್ಯಾಯ ದೊರಕಿಸಿಕೊಡಬೇಕು. ಸರ್ಕಾರದ ಬಂಜಾರ ವಿರೋಧಿ ನೀತಿಯನ್ನು ನಾವು ಬಲವಾಗಿ ಖಂಡಿಸುತ್ತೇವೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಹೋರಾಟದಲ್ಲಿ ಭಾಗವಹಿಸಲಿದ್ದಾರೆ.
ರವಿಕಾಂತ್ ಅಂಗಡಿ,
ವಕೀಲರು ಹಾಗೂ ಬಂಜಾರ ಹಕ್ಕು ಸಂರಕ್ಷಣಾ
ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ.

ಭಾನುವಾರ ಕಸೂತಿ ಚಳುವಳಿ

ಭಾನುವಾರದ ಪ್ರತಿಭಟನೆಯಲ್ಲಿ ಜಿಲ್ಲೆಯ 72 ತಾಂಡಾಗಳ ಪೈಕಿ ಮಹಾಲಿಂಗಪುರ, ಮುರುಡಿ, ಶಿಗ್ಲಿ, ದೊಡ್ಡೂರು ಕಾಲೋನಿ, ಕೊಡಗಾನೂರು, ಸರ್ಜಾಪುರ ತಾಂಡಾಗಳ ಬಂಜಾರ ಸಮುದಾಯದ ಜನರು `ಕಸೂತಿ ಚಳುವಳಿ’ಯಲ್ಲಿ ಭಾಗವಹಿಸುವ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸಲಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!