ತೆರಿಗೆ ಇಳಿಕೆ ನಿರ್ಧಾರ ಸ್ವಾಗತಾರ್ಹ: ರಾಜು ಕುರುಡಗಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಇತ್ತೀಚೆಗೆ ದೆಹಲಿಯಲ್ಲಿ ನಡೆದ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಐತಿಹಾಸಿಕ ತೆರಿಗೆ ಇಳಿಕೆ ನಿರ್ಧಾರವನ್ನು ಕೈಗೊಂಡಿದ್ದು, ಸೆ. 22ರಿಂದ ಜಾರಿಯಾಗಿದೆ. ಶೇ. 28ರಿಂದ 18ಕ್ಕೆ, ಶೇ. 12ರಿಂದ 5ಕ್ಕೆ ತೆರಿಗೆ ಇಳಿಕೆಯಾಗಿದ್ದು, ಇದರಿಂದ ಬಡವರಿಗೆ, ಮಧ್ಯಮ ವರ್ಗದವರಿಗೆ ಸಹಾಯವಾಗಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರುಡಗಿ ಸಂತಸ ವ್ಯಕ್ತಪಡಿಸಿದರು.

Advertisement

ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು, ವ್ಯಾಪಾರಸ್ಥರು, ವಾಣಿಜ್ಯೋದ್ಯಮಿಗಳು, ಜಿಎಸ್‌ಟಿ ವ್ಯಾಪ್ತಿಗೆ ಬರುವ ಎಲ್ಲರ ನೇತೃತ್ವದಲ್ಲಿ ಗದಗ ನಗರದಲ್ಲಿ ಸಂಭ್ರಮಾಚರಣೆ ಆಚರಿಸಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾಧ್ಯಕ್ಷ ಎಂ.ಎಸ್. ಕರೀಗೌಡ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಪಾಟೀಲ, ಆರ್.ಕೆ. ಚವ್ಹಾಣ, ಗದಗ ನಗರ ಮಂಡಲ ಅಧ್ಯಕ್ಷ ಸುರೇಶ ಮರಳಪ್ಪನವರ, ಪ್ರಧಾನ ಕಾರ್ಯದರ್ಶಿ ಶಂಕರ ಕಾಕಿ, ಸುರೇಶ ಚಿತ್ತರಗಿ, ಪ್ರಮುಖರಾದ ಅನಿಲ ಅಬ್ಬಿಗೇರಿ, ಶಶಿಧರ ದಿಂಡೂರ, ಮಂಜುನಾಥ ಮುಳಗುಂದ, ಕೆ.ಪಿ. ಕೋಟಿಗೌಡ್ರ, ರಮೇಶ್ ಸಜ್ಜಗಾರ, ನಾಗರಾಜ ತಳವಾರ, ಜಯಶ್ರೀ ಉಗಲಾಟದ, ವಿಜಯಲಕ್ಷ್ಮಿ ಮಾನ್ವಿ, ಸುರೇಶ ಚಲವಾದಿ, ಕಾರ್ತಿಕ ಶಿಗ್ಲಿಮಠ, ರಾಚಯ್ಯ ಹೊಸಮಠ, ರವಿ ಮಾನ್ವಿ, ದೇವೇಂದ್ರಪ್ಪ ಹೂಗಾರ, ಅವಿನಾಶ ಹೊನಗುಡಿ ಮುಂತಾದವರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here