ಬಡ್ನಿ-ಆದ್ರಳ್ಳಿ ರಸ್ತೆ ಸಂಪರ್ಕಕ್ಕೆ ತಾತ್ಕಾಲಿಕ ವ್ಯವಸ್ಥೆ

0
Temporary arrangement for Badni-Adralli road connection
Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಕಳೆದ 10-12 ದಿನಗಳ ಹಿಂದೆ ಸುರಿದ ಭಾರೀ ಮಳೆಗೆ ತಾಲೂಕಿನ ಪು.ಬಡ್ನಿ-ಆದರಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಸಮೇತ ಕೊಚ್ಚಿ ಹೋಗಿ ಗ್ರಾಮಗಳ ಸಂಪರ್ಕ ಕಡಿತಗೊಂಡಿತ್ತು. ಸ್ಥಳಕ್ಕೆ ಶಾಸಕ ಡಾ. ಚಂದ್ರು ಲಮಾಣಿ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಭೇಟಿ ನೀಡಿ ಪರಿಶೀಲಿಸಿ, ಕೂಡಲೇ ತಾತ್ಕಾಲಿಕ ರಸ್ತೆ ನಿರ್ಮಿಸಿ ಸಾರ್ವಜನಿಕರಿಗೆ ಸಂಪರ್ಕಕ್ಕೆ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

Advertisement

ಈ ಹಿನ್ನೆಲೆಯಲ್ಲಿ ಪಿಡಬ್ಲ್ಯೂಡಿ ಅಧಿಕಾರಿಗಳು ರಸ್ತೆಗೆ ಮೊರಂ ಹಾಕಿ ರಸ್ತೆ ಸಂಪರ್ಕ ಕಲ್ಪಿಸುವ ಕೆಲಸ ಮಾಡಿದ್ದಾರೆ. ಈ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಆದಷ್ಟು ಬೇಗ ಸೇತುವೆ ಮತ್ತು ರಸ್ತೆ ದುರಸ್ತಿ ಮಾಡಿಸಿ ಶಾಶ್ವತ ಪರಿಹಾರ ಕಲ್ಪಿಸಬೇಕೆಬೆಂಬುದು ಸಾರ್ವಜನಿಕರ ಒತ್ತಾಸೆಯಾಗಿದೆ.


Spread the love

LEAVE A REPLY

Please enter your comment!
Please enter your name here