ಭೀಕರ ಅಪಘಾತ: ಕಾರು-ಲಾರಿ ಮುಖಾಮುಖಿ ಡಿಕ್ಕಿ, ಸ್ಥಳದಲ್ಲೇ ಮೂವರು ದುರ್ಮರಣ!

0
Spread the love

ರಾಯಚೂರು:- ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಬಳಿ ಕಾರು, ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿ ಮೂವರು ದುರ್ಮರಣ ಹೊಂದಿದ ಘಟನೆ ಜರುಗಿದೆ.

Advertisement

ಯಾಸಿನ್, ಮಕ್ಬಲ್, ಹರ್ಷದ್ ಅಪಘಾತದಲ್ಲಿ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಾರು ಮಾನ್ವಿಯಿಂದ ರಾಯಚೂರು ಕಡೆ ಹೊರಟಿತ್ತು. ಲಾರಿ ರಾಯಚೂರಿನಿಂದ ಮಾನ್ವಿ ಕಡೆ ಹೊರಟಿದ್ದ ಸಂದರ್ಭ ಭೀಕರ ಅಪಘಾತ ಸಂಭವಿಸಿದೆ. ಇತ್ತೀಚೆಗೆ ಶಾಲಾ ವಾಹನ ಹಾಗೂ ಸರ್ಕಾರಿ ಬಸ್ ನಡುವೆ ಅಪಘಾತವಾಗಿದ್ದ ರಸ್ತೆ ಮಾರ್ಗದಲ್ಲೇ ಘಟನೆ ನಡೆದಿದೆ.

ಅಪಘಾತದ ಬಳಿಕ ಲಾರಿ ಚಾಲಕ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಘಟನಾ ಸ್ಥಳಕ್ಕೆ ಸಿರವಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here