HomeBengaluru Newsಬೆಂಗಳೂರಿನಲ್ಲಿ ಭೀಕರ ಅಪಘಾತ: ಮನೆಗೆ ನುಗ್ಗಿ ಪಲ್ಟಿಯಾದ ಮರಳು ಲಾರಿ, ಮೂವರಿಗೆ ಗಾಯ

ಬೆಂಗಳೂರಿನಲ್ಲಿ ಭೀಕರ ಅಪಘಾತ: ಮನೆಗೆ ನುಗ್ಗಿ ಪಲ್ಟಿಯಾದ ಮರಳು ಲಾರಿ, ಮೂವರಿಗೆ ಗಾಯ

For Dai;y Updates Join Our whatsapp Group

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಮರಳು ತುಂಬಿದ್ದ ಲಾರಿಯೊಂದು ಮನೆಗೆ ನುಗ್ಗಿ ಪಲ್ಟಿಯಾದ ಘಟನೆ ಯಲಹಂಕದ ಮಾದನಹಳ್ಳಿ ಬಳಿ ಸೋಮವಾರ ಮುಂಜಾನೆ ನಡೆದಿದೆ.

ಅಪಘಾತದ ಪರಿಣಾಮ ಮನೆಯ ಗೋಡೆಗೆ ಹಾನಿಯಾಗಿದ್ದು, ಮನೆಯಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಯಲಹಂಕ ಕಡೆಯಿಂದ ಮರಳು ತುಂಬಿಕೊಂಡು ಬರುತ್ತಿದ್ದ ಲಾರಿ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಗೆ ನುಗ್ಗಿದೆ. ಲಾರಿ ಮನೆಯ ಗೋಡೆಗೆ ಡಿಕ್ಕಿ ಹೊಡೆದ ರಭಸಕ್ಕೆ ಗೋಡೆ ಜಖಂಗೊಂಡಿದ್ದು, ಬಳಿಕ ಲಾರಿ ಪಲ್ಟಿಯಾಗಿದೆ. ಮನೆಯಲ್ಲಿದ್ದ ಕೆಲವು ವಸ್ತುಗಳಿಗೂ ಹಾನಿಯಾಗಿದೆ.

ಅಪಘಾತದ ಬಳಿಕ ಲಾರಿ ಅಡಿಯಲ್ಲಿ ಚಾಲಕ ಸಿಲುಕಿಕೊಂಡಿದ್ದು, ಆತನನ್ನು ರಕ್ಷಿಸಲು ಅಗ್ನಿಶಾಮಕ ಸಿಬ್ಬಂದಿ ಹಾಗೂ ರಕ್ಷಣಾ ತಂಡ ಕಾರ್ಯಾಚರಣೆ ನಡೆಸುತ್ತಿದೆ. ಚಾಲಕನನ್ನು ಹೊರತೆಗೆಯಲು ಕ್ರೇನ್‌ ಮೂಲಕ ಲಾರಿಯನ್ನು ಮೇಲಕ್ಕೆತ್ತುವ ಪ್ರಯತ್ನ ಮುಂದುವರಿದಿದೆ.

ಲಾರಿ ಚಾಲಕ ನಿದ್ರೆ ಮಂಪರಿನಲ್ಲಿದ್ದ ವೇಳೆ ವಾಹನದ ಮೇಲಿನ ನಿಯಂತ್ರಣ ಕಳೆದುಕೊಂಡಿರುವ ಸಾಧ್ಯತೆಯಿದೆ ಎಂದು ಶಂಕಿಸಲಾಗಿದೆ. ಆದರೆ ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಚಾಲಕನ ರಕ್ಷಣಾ ಕಾರ್ಯಾಚರಣೆಗೆ ಗ್ಯಾಸ್‌ ಕಟರ್‌ ಬಳಸಲು ಸಿಬ್ಬಂದಿ ಸಿದ್ಧತೆ ನಡೆಸಿದ್ದಾರೆ. ಲಾರಿಯ ಮೇಲ್ಭಾಗವನ್ನು ಕತ್ತರಿಸಿ ಚಾಲಕನನ್ನು ಸುರಕ್ಷಿತವಾಗಿ ಹೊರತೆಗೆಯಲು ಯೋಜಿಸಲಾಗಿದೆ.

ಘಟನಾ ಸ್ಥಳದಲ್ಲಿ ಆಂಬ್ಯುಲೆನ್ಸ್‌ ಬೀಡುಬಿಟ್ಟಿದ್ದು, ತುರ್ತು ಚಿಕಿತ್ಸೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮನೆಯಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವ್ಯವಸ್ಥೆ ಮಾಡಲಾಗಿದೆ.

ಘಟನಾ ಸ್ಥಳದಲ್ಲಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ರಕ್ಷಣಾ ತಂಡದಿಂದ ಕಾರ್ಯಾಚರಣೆ ಮುಂದುವರಿದಿದ್ದು, ಲಾರಿ ಅಡಿಯಲ್ಲಿ ಸಿಲುಕಿರುವ ಚಾಲಕನನ್ನು ಸುರಕ್ಷಿತವಾಗಿ ಹೊರತೆಗೆಯಲು ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img