ಚಿಕ್ಕಬಳ್ಳಾಪುರ: ಭೀಕರ ಅಪಘಾತದಲ್ಲಿ ಚಿಕ್ಕಬಳ್ಳಾಪುರದ ಮೂವರು ಸಾವನ್ನಪ್ಪಿರುವ ಘಟನೆ ಆಂಧ್ರದಲ್ಲಿ ಜರುಗಿದೆ.ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಮದನಪಲ್ಲಿ ತಾಲೂಕಿನ ಕುರುಬಲಕೋಟ ಮಂಡಲದ ಚೆನ್ನಾಮರ್ರಿಮಿಟ್ಟ ಬಳಿ ಟಿಟಿ ವಾಹನಕ್ಕೆ ಅಪರಿಚಿತ ಭಾರೀ ವಾಹನ ಡಿಕ್ಕಿ ಹೊಡೆದ ಪರಿಣಾಮ, ಕಾರು ತಲೆಕೆಳಗಾಗಿ ದುರಂತ ನಡೆದಿದೆ.
ಅಪಘಾತದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಳ್ಳಿ ತಾಲ್ಲೂಕಿನ ಮೇಘೇಶ್ (17), ಚರಣ್ (17) ಮತ್ತು ಶ್ರಾವಣಿ (28) ದುರ್ಮರಣ ಹೊಂದಿದ್ದಾರೆ. ಇನ್ನೂ ಒಂಬತ್ತು ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಬಾಗೇಪಳ್ಳಿ–ತಿರುಪತಿ ಮಧ್ಯದ ರಸ್ತೆಯಲ್ಲಿ ಸಂಭವಿಸಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ



