ಮಂಡ್ಯ:- ಜಿಲ್ಲೆಯ ಮದ್ದೂರಿನ ನಿಡಘಟ್ಟ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಭಾನುವಾರ ಜರುಗಿದೆ. ಮಸೂದ್ ಹಾಗೂ ಅಯಾನ್ ಮೃತರು. ಖುಷಿ, ಚಿಕ್ಕು, ಮುಜಾಯಿದ್ ಪಾಷ, ಬಸವರಾಜು, ಪಾರ್ವತಿ ಗಂಭೀರ ಗಾಯಗೊಂಡವರು.
Advertisement
ಬೆಂಗಳೂರಿನ ಕಡೆಯಿಂದ ಬರುತ್ತಿದ್ದ ಕಾರು ಡಿವೈಡರ್ ದಾಟಿ ಮಂಡ್ಯದ ಕಡೆಯಿಂದ ಬರುತ್ತಿದ್ದ ಎರಡು ಕಾರುಗಳಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅತಿವೇಗ ಮತ್ತು ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಭಾನುವಾರ ತಡರಾತ್ರಿ ಅಪಘಾತ ಸಂಭವಿಸಿದೆ. ಅಪಘಾತದ ಬಳಿಕ ಹೈವೇ ರಸ್ತೆಯನ್ನು ಬಂದ್ ಮಾಡಿ ಸರ್ವಿಸ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಘಟನೆಯಲ್ಲಿ ಗಾಯಗೊಂಡ ಕೆಲವರಿಗೆ ಬೆಂಗಳೂರು ಹಾಗೂ ಇನ್ನೂ ಕೆಲವರಿಗೆ ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.