ಭೀಕರ ರಸ್ತೆ ಅಪಘಾತ: ಕುಂಭಮೇಳಕ್ಕೆ​ ತೆರಳುತ್ತಿದ್ದ ಬೆಳಗಾವಿಯ 7 ಮಂದಿ ದುರ್ಮರಣ!

0
Spread the love

ಬೆಳಗಾವಿ:- ಕುಂಭಮೇಳಕ್ಕೆ​ ತೆರಳುತ್ತಿದ್ದ ಕ್ರೂಸರ್​ ವಾಹನ ಅಪಘಾತಕ್ಕೀಡಾಗಿ ಬೆಳಗಾವಿಯ 7 ಮಂದಿ ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ಜರುಗಿದೆ.

Advertisement

ಮಧ್ಯ ಪ್ರದೇಶದ ಜಬಲಪೂರ ಪೆಹರಾ ಟೋಲ್ ನಾಕಾ ಬಳಿ ಬೆಳಗಿನ ಜಾವ ಕ್ರೂಸರ್‌ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ದುರಂತ ಸಂಭವಿಸಿದೆ. 7 ಮಂದಿ ಕನ್ನಡಿಗರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.

ಕಳೆದ ಎರಡು ದಿನಗಳ ಹಿಂದೆ ಗೋಕಾಕ್‌ ನಗರದಿಂದ 10 ಮಂದಿ ಕ್ರೂಸರ್‌ನಲ್ಲಿ ಮಹಾ ಕುಂಭಮೇಳಕ್ಕೆ ಹೊರಟಿದ್ದರು. ಇಂದು ಮುಂಜಾನೆ ಮಧ್ಯಪ್ರದೇಶ ಸಾರಿಗೆ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.


Spread the love

LEAVE A REPLY

Please enter your comment!
Please enter your name here