ಶಿವಮೊಗ್ಗ:- ಜಿಲ್ಲೆಯ ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್ನ ಭದ್ರಾ ನಾಲೆಯಲ್ಲಿ ಕಾಲುಜಾರಿ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ನೀರುಪಾಲಾದ ಘಟನೆ ಜರುಗಿದೆ.
ಮೃತರನ್ನು ನೀಲಾ ಬಾಯಿ(50), ಮಗ ರವಿ(23), ಮಗಳು ಶ್ವೇತಾ(24) ಮತ್ತು ಅಳಿಯ ಪರಶುರಾಮ(28) ಎಂದು ಗುರುತಿಸಲಾಗಿದೆ. ಮಾರಿ ಹಬ್ಬಕ್ಕೆಂದು ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್ ಗ್ರಾಮದಲ್ಲಿರುವ ಸಂಬಂಧಿಕರ ಮನೆಗೆ ಆಗಮಿಸಿದ್ದರು. ಈ ವೇಳೆ ಬಟ್ಟೆ ತೊಳೆಯಲು ನಾಲೆಗೆ ತೆರಳಿದ್ದಾರೆ. ಒಬ್ಬರು ಕಾಲು ಜಾರಿ ಭದ್ರಾ ನಾಲೆಗೆ ಬಿದ್ದಿದ್ದು, ಅವರನ್ನ ರಕ್ಷಿಸಲು ಹೋಗಿ ನಾಲ್ವರೂ ನೀರುಪಾಲಾಗಿದ್ದಾರೆ.
ಸದ್ಯ ಶವಗಳಿಗಾಗಿ ಹೊಳೆಹೊನ್ನೂರು ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಶೋಧ ನಡೆದಿದೆ. ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.



