HomeBengaluru Newsಮಂಗಳೂರು ಕುಕ್ಕರ್ ಬಾಂಬ್ ಪ್ರಕರಣದಲ್ಲಿ ಉಗ್ರ ಚಟುವಟಿಕೆ ಬಯಲು: ತಪ್ಪೊಪ್ಪಿಕೊಂಡ ಪ್ರಮುಖ ಆರೋಪಿ ಶಾರೀಕ್!

ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣದಲ್ಲಿ ಉಗ್ರ ಚಟುವಟಿಕೆ ಬಯಲು: ತಪ್ಪೊಪ್ಪಿಕೊಂಡ ಪ್ರಮುಖ ಆರೋಪಿ ಶಾರೀಕ್!

For Dai;y Updates Join Our whatsapp Group

Spread the love

ಮಂಗಳೂರು: ಕಳೆದ ನಾಲ್ಕು ವರ್ಷಗಳ ಹಿಂದೆ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಆರೋಪಿ ಮೊಹಮ್ಮದ್ ಶಾರೀಕ್ ತನ್ನ ತಪ್ಪನ್ನು ನ್ಯಾಯಾಲಯದ ಮುಂದೆ ಒಪ್ಪಿಕೊಂಡಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಎನ್‌ಐಎ ವಿಶೇಷ ನ್ಯಾಯಾಲಯವು ಆತನ ತಪ್ಪೊಪ್ಪಿಗೆ ಅರ್ಜಿಯನ್ನು ಅಂಗೀಕರಿಸಿದೆ.

2022ರ ನವೆಂಬರ್ 19ರಂದು ಆಟೋರಿಕ್ಷಾದಲ್ಲಿ ಸಾಗಿಸುತ್ತಿದ್ದ ಪ್ರೆಶರ್ ಕುಕ್ಕರ್ ಬಾಂಬ್ ಟೈಮರ್ ದೋಷದಿಂದ ಶಾರೀಕ್ ಮಡಿಲಲ್ಲೇ ಸ್ಫೋಟಗೊಂಡಿದ್ದು, ಆತ ಗಂಭೀರವಾಗಿ ಗಾಯಗೊಂಡಿದ್ದ. ಈ ಘಟನೆಯಲ್ಲಿ ಆಟೋ ಚಾಲಕನಿಗೂ ಗಾಯಗಳಾಗಿದ್ದವು.

ಮೊದಲಿಗೆ ತನ್ನ ನಿರಪರಾಧಿತ್ವವನ್ನು ಹೇಳಿದ್ದ ಶಾರೀಕ್, ಬಳಿಕ ಕ್ರಿಮಿನಲ್ ಪ್ರೊಸೀಜರ್ ಕೋಡ್ ಸೆಕ್ಷನ್ 229 ಅಡಿಯಲ್ಲಿ ತಪ್ಪೊಪ್ಪಿಗೆ ಅರ್ಜಿ ಸಲ್ಲಿಸಿ, “ನಾನು ಐಇಡಿ ಬಳಸಿ ಸ್ಫೋಟ ಮಾಡಿದ್ದೇನೆ” ಎಂದು ಒಪ್ಪಿಕೊಂಡಿದ್ದಾನೆ.

ಎನ್‌ಐಎ ತನಿಖೆ ಶಾರೀಕ್ ಐಸಿಸ್ ಪ್ರೇರಿತ ಮಾಡ್ಯೂಲ್‌ನೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂಬುದನ್ನು ಬಹಿರಂಗಪಡಿಸಿದೆ. 2020ರಿಂದಲೇ ಆತ ಭಯೋತ್ಪಾದಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದು, ಶಿವಮೊಗ್ಗ ಐಇಡಿ ಪರೀಕ್ಷೆ ಮತ್ತು ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಇದಲ್ಲದೆ, ಬೆಂಗಳೂರಿನ ರಾಮೇಶ್ವರಂ ಕಫೆ ಬಾಂಬ್ ಸ್ಫೋಟ ಪ್ರಕರಣದಲ್ಲೂ ಆತನ ಸಂಪರ್ಕದ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಸದ್ಯಕ್ಕೆ ಆತ ಕುಕ್ಕರ್ ಬಾಂಬ್ ಪ್ರಕರಣದಲ್ಲಷ್ಟೇ ತಪ್ಪೊಪ್ಪಿಕೊಂಡಿದ್ದಾನೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!