ಕಾಶ್ಮೀರದಲ್ಲಿ ಉಗ್ರರ ದಾಳಿ: ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ – ರಾಜ್ಯ ಸರ್ಕಾರ!

0
Spread the love

ಬೆಂಗಳೂರು:- ಜಮ್ಮು ಕಾಶ್ಮೀರದ ಪ್ರಸಿದ್ಧ ಪ್ರವಾಸಿ ತಾಣವಾದ ಪಹಲ್ಗಾಮ್ ಧಾಮದ ಮೇಲೆ ಮಂಗಳವಾರ ಉಗ್ರರ ಗುಂಡಿನ ದಾಳಿ ನಡೆದಿದೆ. ಧಾಮವನ್ನು ಪ್ರವೇಶಿಸಿದ್ದ ಇಬ್ಬರು ಬಂದೂಕುಧಾರಿಗಳು ಅಲ್ಲಿದ್ದ ಪ್ರವಾಸಿಗರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಉಗ್ರರ ದಾಳಿಯಲ್ಲಿ ಮೃತಪಟ್ಟಿರುವ ಕರ್ನಾಟಕದ ಪ್ರತಿ ನಾಗರಿಕರ ಕುಟುಂಬಗಳಿಗೆ ತಲಾ 10 ಲಕ್ಷ ರೂ.ಗಳ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಈ ಘೋಷಣೆ ಮಾಡಿದೆ.

Advertisement

ಭಯೋತ್ಪಾದಕರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು. ದಾಳಿಯಲ್ಲಿ ಕನ್ನಡಿಗರು ಮೃತಪಟ್ಟಿದ್ದು, ಅವರ ಪಾರ್ಥೀವ ಶರೀರವನ್ನು ರಾಜ್ಯಕ್ಕೆ ತರಲು ಸಕಲ ಸಿದ್ಧತೆಗಳು ನಡೆದಿವೆ. ಪಾರ್ಥೀವ ಶರೀರ ರಾಜ್ಯಕ್ಕೆ ಬರುತ್ತಿದ್ದಂತೆ ಅಂತ್ಯಸಂಸ್ಕಾರಕ್ಕೆ ಸಲ ವ್ಯವಸ್ಥೆ ಮಾಡಲಾಗುತ್ತಿದೆ. ಜೊತೆಗೆ ಬದುಕುಳಿದಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ.

ಇನ್ನೂ ಉಗ್ರರ ದಾಳಿ ಬಗ್ಗೆ ಮಾತನಾಡಿದ ಸಿಎಂ, ಕಾಶ್ಮೀರದ ಪಹಲ್ಗಾಮ್‌ನ ಉಗ್ರರ ದಾಳಿಯ ಸಂದರ್ಭದಲ್ಲಿ ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಸಕಲ ವ್ಯವಸ್ಥೆ ಮಾಡಿದೆ ಹಾಗೂ ಉಗ್ರರ ದಾಳಿಯ ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ ಎಂದು ತಿಳಿಸಿದರು.


Spread the love

LEAVE A REPLY

Please enter your comment!
Please enter your name here