HomeEntertainmentಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಕ್ಕೂ ಟೀಕೆ ಎದುರಿಸಿದ ದಳಪತಿ ವಿಜಯ್: ಕಾರಣವೇನು?

ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಕ್ಕೂ ಟೀಕೆ ಎದುರಿಸಿದ ದಳಪತಿ ವಿಜಯ್: ಕಾರಣವೇನು?

For Dai;y Updates Join Our whatsapp Group

Spread the love

ನಟ ದಳಪತಿ ವಿಜಯ್ ಸದ್ಯ ಸಿನಿಮಾ ಹಾಗೂ ರಾಜಕೀಯ ಎರಡೂ ವಲಯಗಳಲ್ಲಿ ಭಾರೀ ಚರ್ಚೆಯಲ್ಲಿದ್ದಾರೆ. ಅವರ ಬಹು ನಿರೀಕ್ಷಿತ ಸಿನಿಮಾ ‘ಜನ ನಾಯಗನ್’ ಬಿಡುಗಡೆ ಬಗ್ಗೆ ಇನ್ನೂ ಯಾವುದೇ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಈ ಮಧ್ಯೆ, ವಿಜಯ್ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ.

ಚೆನ್ನೈನಲ್ಲಿ ನಡೆದ ಹೈಪ್ರೊಫೈಲ್ ಮದುವೆ ಸಮಾರಂಭದಲ್ಲಿ ವಿಜಯ್ ಹಾಜರಿದ್ದು, ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ಸೇರಿದಂತೆ ಹಲವು ಗಣ್ಯರು ಈ ಸಮಾರಂಭದಲ್ಲಿ ಭಾಗವಹಿಸಿದ್ದರು. ಈ ವಿಚಾರ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಕೆಲವರು ವಿಜಯ್ ಅವರ ಹಾಜರಿಯನ್ನು ಪ್ರಶ್ನಿಸಿ ಟೀಕಿಸಿದ್ದಾರೆ.

ಹಿಂದೆ ಕರೂರಿನಲ್ಲಿ ನಡೆದ ವಿಜಯ್ ರ್ಯಾಲಿಯ ವೇಳೆ ಉಂಟಾದ ಕಾಲ್ತುಳಿತದಲ್ಲಿ 41 ಮಂದಿ ಪ್ರಾಣ ಕಳೆದುಕೊಂಡಿದ್ದರು. ಈ ಪ್ರಕರಣದಲ್ಲಿ ವಿಜಯ್ ವಿರುದ್ಧ ಹೊಣೆಗಾರಿಕೆ ಆರೋಪಗಳು ಕೇಳಿಬಂದಿದ್ದು, ಅವರು ಈಗ ವಿಚಾರಣೆ ಎದುರಿಸುತ್ತಿದ್ದಾರೆ. ಇಂತಹ ಹಿನ್ನೆಲೆಯಲ್ಲೇ ಮದುವೆ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿರುವುದು ಜನರ ಅಸಮಾಧಾನಕ್ಕೆ ಕಾರಣವಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ “ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಮಯ ಕೊಡದವರು, ಮದುವೆ ಸಮಾರಂಭಕ್ಕೆ ತೆರಳಿರುವುದು ನೋವು ತಂದಿದೆ” ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ. ಮತ್ತೊಂದೆಡೆ, ಕೆಲವರು ವಿಜಯ್ ಅವರನ್ನು ಅನಗತ್ಯವಾಗಿ ಗುರಿಯಾಗಿಸಲಾಗುತ್ತಿದೆ ಎಂದು ಸಮರ್ಥನೆಯನ್ನೂ ನೀಡಿದ್ದಾರೆ.

ಇನ್ನು ವಿಜಯ್ ಅಭಿನಯದ ‘ಜನ ನಾಯಗನ್’ ಚಿತ್ರದಲ್ಲಿನ ರಾಜಕೀಯ ಅಂಶಗಳೇ ಬಿಡುಗಡೆ ವಿಳಂಬಕ್ಕೆ ಕಾರಣ ಎಂಬ ಚರ್ಚೆ ಜೋರಾಗಿದೆ. ಕನ್ನಡದ ಕೆವಿಎನ್ ಸಂಸ್ಥೆ ನಿರ್ಮಿಸಿರುವ ಈ ಚಿತ್ರಕ್ಕೆ ಸಂಬಂಧಿಸಿದಂತೆ ಅಧಿಕೃತ ಘೋಷಣೆಗೆ ಅಭಿಮಾನಿಗಳು ಕಾಯುತ್ತಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!