ವ್ಯಕ್ತಿ ಬೆತ್ತಲೆ ಮಾಡಿ ಹಲ್ಲೆ ಮಾಡಿದ್ದ ಆರೋಪಿ ಕಾಲಿಗೆ ಗುಂಡೇಟು!

0
Spread the love

ಬೆಂಗಳೂರು:- ಬೆಂಗಳೂರಿನ ಜ್ಞಾನಭಾರತಿಯ ಉಳ್ಳಾಲ ಬಳಿ ರೌಡಿಶೀಟರ್​ ಪವನ್​ ಅಲಿಯಾಸ್ ಕಡುಬು ಮೇಲೆ ಫೈರಿಂಗ್ ಮಾಡಲಾಗಿದೆ.

Advertisement

ಈತ ಇತ್ತೀಚೆಗೆ ವ್ಯಕ್ತಿಯೋರ್ವನನ್ನು ನಗ್ನಗೊಳಿಸಿ ಹಲ್ಲೆ ಮಾಡಿದ್ದ ಎನ್ನಲಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಗೊವಿಂದರಾಜನಗರ ಇನ್ಸ್​ಪೆಕ್ಟರ್​ ಸುಬ್ರಮಣ್ಯ ಮತ್ತು ಸಿಬ್ಬಂದಿ ಆರೋಪಿ ಪವನ್​ನನ್ನು ತುಮಕೂರಿನಲ್ಲಿ ಬಂಧಿಸಿ ಕರೆತರುತ್ತಿದ್ದರು.

ಇಂದು ನಸುಕಿನ ಜಾವ 5 ಗಂಟೆ ಸುಮಾರಿಗೆ ಪೊಲೀಸ್​ ವಾಹನ ಜ್ಞಾನಭಾರತಿಯ ಉಳ್ಳಾಲ ಬಳಿ ಬರುತ್ತಿದ್ದಂತೆ ಆರೋಪಿ ಪವನ್​ ಕಾನ್ಸ್​ಟೇಬಲ್​ ವೆಂಕಟೇಶ್ ಅವರ ಮೇಲೆ ಹಲ್ಲೆ ಮಾಡಿ, ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಹಿಡಿಯಲು ಹೋದ ಇನ್ಸ್​ಪೆಕ್ಟರ್​ ಸುಬ್ರಮಣ್ಯ ಅವರ ಮೇಲೂ ಹಲ್ಲೆ ಮಾಡಲು ಮುಂದಾದನು. ಆಗ, ಇನ್ಸ್​ಪೆಕ್ಟರ್​ ಸುಬ್ರಮಣ್ಯ ಅವರು ಆತ್ಮರಕ್ಷಣೆಗೆ ಆರೋಪಿ ಪವನ್​ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ತಿಳಿದು ಬಂದಿದೆ.


Spread the love

LEAVE A REPLY

Please enter your comment!
Please enter your name here