ಕಾನೂನು ಸಮರ ಮುಂದುವರೆಸಿಕೊಂಡೇ ಆಡಳಿತ ನಡೆಸಲಾಗುವುದು: ಡಾ. ಜಿ.ಪರಮೇಶ್ವರ್

0
Spread the love

ಬೆಂಗಳೂರು: ರಾಜ್ಯಪಾಲರಿಂದ ಪ್ರಾಸಿಕ್ಯೂಷನ್​ಗೆ ಅನುಮತಿಯಿಂದ ಸರ್ಕಾರ ಸ್ವಲ್ಪಮಟ್ಟಿಗೆ ಶೇಕ್ ಆಗಿದೆ. ಇಲ್ಲ ಅಂತ ಹೇಳಿದರೆ ನಾನು ಸುಳ್ಳು ಹೇಳಿದಂತಾಗುತ್ತದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯಪಾಲರಿಂದ ಪ್ರಾಸಿಕ್ಯೂಷನ್​ಗೆ ಅನುಮತಿಯಿಂದ ಸರ್ಕಾರ ಸ್ವಲ್ಪಮಟ್ಟಿಗೆ ಶೇಕ್ ಆಗಿದೆ. ಇಲ್ಲ ಅಂತ ಹೇಳಿದರೆ ನಾನು ಸುಳ್ಳು ಹೇಳಿದಂತಾಗುತ್ತದೆ.

Advertisement

ಇದನ್ನು ನಾವು ಸರಿಪಡಿಸಿಕೊಂಡು ಆಡಳಿತ ಮುಂದುವರೆಸುತ್ತೇವೆ. ಸಂಪುಟ ಸಭೆಯಲ್ಲೂ ನಾವ್ಯಾರೂ ಬಿಜೆಪಿ ಹುನ್ನಾರಕ್ಕೆ ಬಲಿಯಾಗೋದು ಬೇಡ, ಆಡಳಿತ ಮಾಡಿಕೊಂಡು ಹೋಗೋಣ ಅಂತ ತೀರ್ಮಾನಿಸಿದ್ದೇವೆ. ಕಾನೂನು ಸಮರ ಮುಂದುವರೆಸಿಕೊಂಡೇ ಆಡಳಿತ ನಡೆಸಲಾಗುವುದು” ಎಂದರು.

ಇಡೀ ಪ್ರಕರಣ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ರಾಜ್ಯಪಾಲರು ರಾಜಕೀಯ ಕಾರಣಕ್ಕೆ ಇದನ್ನೆಲ್ಲ ಮಾಡುತ್ತಿದ್ದಾರೆ. ರಾಜ್ಯಪಾಲರ ಕಚೇರಿಯನ್ನು ಸಹ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ನಾವು ಕಾನೂನು ಹಾಗೂ ರಾಜಕೀಯ ಹೋರಾಟ ಮಾಡಲು ಸಂಪುಟ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ.

ಜಿಲ್ಲೆ, ತಾಲೂಕುಗಳಲ್ಲಿ ನಮ್ಮ ಕಾರ್ಯಕರ್ತರು ಹೋರಾಟಕ್ಕೆ ಇಳಿಯುವ ಅನಿವಾರ್ಯತೆ ಬಂದಿದೆ. ಅವರಿಗೆ ರಾಜಕೀಯ ಉತ್ತರ ಕೊಡಲು ರಾಜಕೀಯ ಹೋರಾಟವೇ ಮಾಡಬೇಕು. ಅದಕ್ಕಾಗಿ ಕೆಪಿಸಿಸಿ ಅಧ್ಯಕ್ಷರು ರಾಜ್ಯಾದ್ಯಂತ ಶಾಂತಿಯುತ ಪ್ರತಿಭಟನೆ ನಡೆಸಲು ಕರೆ ಕೊಟ್ಟಿದ್ದಾರೆ. ನಾಳೆಯಿಂದ ರಾಜ್ಯದಲ್ಲಿ ಪ್ರತಿಭಟನೆ ಮಾಡಲಾಗುತ್ತದೆ” ಎಂದು ತಿಳಿಸಿದರು.

 


Spread the love

LEAVE A REPLY

Please enter your comment!
Please enter your name here