ಮಂಡ್ಯ: ನಿಯಂತ್ರಣ ತಪ್ಪಿ ರಸ್ತೆ ವಿಭಜಕ್ಕೆ ಕಾರು ಡಿಕ್ಕಿಯಾಗಿ ಇಬ್ಬರ ಸಾವನ್ನಪ್ಪಿದ್ದು, ಮತ್ತಿಬ್ಬರಿಗೆ ಗಾಯಗಳಾಗಿರುವ ಘಟನೆ ಮೈಸೂರು ಬೆಂಗಳೂರು ಎಕ್ಸ್ಪ್ರೆಸ್ ವೇ ನಲ್ಲಿ ಘಟನೆ ರುದ್ರಾಕ್ಷಿಪುರ ಗ್ರಾಮದ ಬೆಂ-ಮೈ ಹೆದ್ದಾರಿಯಲ್ಲಿ ನಡೆದಿದೆ. ಬೆಂಗಳೂರಿನ ಬಗಲಕುಂಟೆ ನಿವಾಸಿಗಳಾದ ಕಲಾ( 40), ಪುತ್ರ ದರ್ಶನ್ ( 21)ಮೃತಪಟ್ಟವರಾಗಿದ್ದು,
Advertisement
ಕಾರಿನ ಹಿಂಬದಿಯಲ್ಲಿದ್ದ ಪುತ್ರಿ ಮೇಘನ ಹಾಗೂ ಅಳಿಯ ಮಂಜುನಾಥ್ ಗಾಯಗಳಾಗಿವೆ. ರಸ್ತೆ ವಿಭಜಕ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಾಯಿ ಹಾಗೂ ಪುತ್ರ ಸ್ಥಳದಲ್ಲೇ ಸಾವು ಕಾರಿನಲ್ಲಿದ್ದ ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗನ್ನ ಮಂಡ್ಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದ್ದು, ಮಿಮ್ಸ್ ಶವಗಾರಕ್ಕೆ ಮೃತ ದೇಹಗಳ ರವಾನೆ ಮಾಡಲಾಗಿದೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.