ಬೆಂಗಳೂರು: ಕೆಲಸಕ್ಕೆ ಬರುವುದಿಲ್ಲ ಎಂದ ಕಾರ್ಮಿಕರಿಗೆ ಹಿಗ್ಗಾ ಮುಗ್ಗಾ ಥಳಿಸಿದ ಘಟನೆ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಪ್ರತಿಕ್ರಿಯೇ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಈ ಕುರಿತು ಎಸ್ಪಿ ಜೊತೆ ಸಂಪರ್ಕದಲ್ಲಿದ್ದೇನೆ. ಪೊಲೀಸರಿಂದ ನಾನು ಮಾಹಿತಿ ಪಡೆದಿದ್ದೇನೆ. ಈಗಾಗಲೇ ಆರೋಪಿಗಳ ವಿರುದ್ಧ ದೂರು ದಾಖಲಾಗಿದೆ. ಎಪಿಎಂಸಿ ವ್ಯಾಪ್ತಿಯ ಬಾವಿಕಟ್ಟಿ ತಾಂಡಾದಲ್ಲಿ ಈ ಘಟನೆ ನಡೆದಿದೆ.
Advertisement
ಮೂವರು ದಲಿತ ಸಮುದಾಯಕ್ಕೆ ಸೇರಿದವರು. ಆರೋಪಿಗಳನ್ನು ಬಂಧಿಸಿ ಸೂಕ್ತ ಕ್ರಮ ಜರುಗಿಸುತ್ತೇವೆ. ಈ ಕುರಿತು ಜಿಲ್ಲಾಧಿಕಾರಿಯ ಜೊತೆಗೂ ಮಾತನಾಡಿದ್ದೇನೆ. ಮಾಲೀಕ ಖೇಮು ರಾಠೋಡ ಕಾಂಪ್ರಮೈಸ್ಗೂ ಯತ್ನ ನಡೆಸಿದ್ದ. ಆದರೆ ಅದ್ಯಾವುದಕ್ಕೂ ಅವಕಾಶ ಕೊಡದೇ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.