ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದ ಹಿಂದಿರುವವರ ಮಾಹಿತಿ ಮುಖ್ಯಮಂತ್ರಿಗಳಿಗೆ ಇದ್ದೇ ಇರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕೆಂಪೇಗೌಡ ಏರ್ಪೋರ್ಟ್ನಲ್ಲಿ ಪ್ರೋಟೋಕಾಲ್ ಸಿಗುತ್ತದೆ.
Advertisement
ಸೆಕ್ಯುರಿಟಿ ತಪಾಸಣೆ ಆಗುವುದಿಲ್ಲ ಎಂದಾದರೆ, ಇದರ ಹಿಂದೆ ಕೆಲವು ಘಟಾನುಘಟಿಗಳಿದ್ದಾರೆ. ಅಲ್ಲದೇ ಕೆಲವು ಸಚಿವರಿದ್ದಾರೆ ಎಂಬುದು ಕೂಡ ಹೊರಕ್ಕೆ ಬರುತ್ತಿದೆ. ಈಗಾಗಲೇ ಸಿಬಿಐ, ಇ.ಡಿ. ತನಿಖೆ ನಡೆಯುತ್ತಿದೆ. ಈ ಗಂಭೀರ ಪ್ರಕರಣದ ಹಿಂದಿರುವವರ ಮಾಹಿತಿ ಮುಖ್ಯಮಂತ್ರಿಗಳಿಗೆ ಇದ್ದೇ ಇರುತ್ತದೆ ಎಂದರು.
ಸ್ಮಗ್ಲಿಂಗ್ ಹಿಂದೆ ಇರುವ ಹವಾಲಾ ನಿರತರು, ಚಿನ್ನ ಕಳ್ಳಸಾಗಾಟದ ಮಾಫಿಯಾಗಳು, ಬೆಂಬಲ ಕೊಟ್ಟ ರಾಜಕಾರಣಿಗಳು, ಮಂತ್ರಿಗಳು, ಮಾಜಿ ಮಂತ್ರಿಗಳು, ಶಾಸಕರು, ಮಾಜಿ ಶಾಸಕರು ಯಾರೆಂಬುದನ್ನು ಸಿಎಂ ಅವರು ಬಹಿರಂಗಪಡಿಸಲಿ ಎಂದು ಒತ್ತಾಯಿಸಿದರು.