ಮೈಸೂರು: ಕೆಲವೇ ಹೊತ್ತಿನಲ್ಲಿ ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಚಾಲನೆ ಸಿಗಲಿದೆ. ಹೌದು, ಸಂಜೆ 4.40ರಿಂದ 5 ಗಂಟೆ ಒಳಗೆ ಚಾಮುಂಡಿಮೂರ್ತಿಗೆ ಪುಷ್ಪಾರ್ಚನೆ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ಸತತ 4ನೇ ಬಾರಿ 750 ಕೆ.ಜಿ ತೂಕದ ಚಿನ್ನದ ಅಂಬಾರಿ ಹೊತ್ತು ಅಭಿಮನ್ಯು ಸಾಗಲಿದೆ. ಅರಮನೆಯಿಂದ ಬನ್ನಿಮಂಟಪದವರೆಗೆ ಈ ಮೆರವಣಿಗೆ ನಡೆಯಲಿದೆ. ಜಂಬೂಸವಾರಿಯಲ್ಲಿ 49 ಸ್ತಬ್ದಚಿತ್ರಗಳು, ವಿವಿಧ ಕಲಾತಂಡಗಳು ಭಾಗಿಯಾಗಿದ್ದು, ಲಕ್ಷಾಂತರ ಜನರು ದಸರಾ ಜಂಬೂಸವಾರಿಗೆ ಸಾಕ್ಷಿಯಾಗಲಿದ್ದಾರೆ.
Advertisement