ಗದಗ: ಮಕ್ಕಳ ಕೂದಲು ಕಟ್ ಮಾಡಿದ್ದ ಕಂಪೂಟರ್ ಶಿಕ್ಷಕನಿಗೆ ಪೋಷಕರು ಧರ್ಮಧೇಟು ಕೊಟ್ಟಿರುವ ಘಟನೆ ಗದಗ ಬೆಟಗೇರಿ ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
Advertisement
ಶಿಕ್ಷಕ ಬೆನೋಯ್ ಶಾಲೆಯ ಆರು ಜನ ಮಕ್ಕಳಿಗೆ ಹೇರ್ ಕಟ್ ಮಾಡಿದ್ದನು. ಇದ್ದರಿಂದ ಕೂದಲು ಕಟ್ ಮಾಡುವ ವೇಳೆ ಏಳನೇ ತರಗತಿ ವಿದ್ಯಾರ್ಥಿಗೆ ಕತ್ತರಿಯಿಂದ ಗಾಯ ಮಾಡಿದ್ದ ಶಿಕ್ಷಕನ ವರ್ತನೆಗೆ ಪೋಷಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನೂ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಆರ್ ಎಸ್ ಬುರಡಿ ಎದುರೇ ಪೋಷಕರು ಶಿಕ್ಷಕನಿಗೆ ಧರ್ಮದೇಟು ಕೊಟ್ಟಿದ್ದಾರೆ.
ಬೆನೋಯ್ ವಜಾಗೊಳಿಸುವಂತೆ ಪಾಲಕರ ಆಗ್ರಹಿಸಿದ್ದು, ದುರ್ವರ್ತನೆ ತೋರಿದ ಶಿಕ್ಷಕನ ಬಗ್ಗೆ ಬಿಇಒ ವರದಿ ಪಡೆದು ಮೇಲಧಿಕಾರಿಗಳಿಗೆ ವರದಿ ನೀಡಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗದಗ ಶಹರ ಬಿಇಒ ಆರ್ ಎಸ್ ಬುರಡಿ ಮಾಹಿತಿ ನೀಡಿದ್ದಾರೆ.