ಬೆಂಗಳೂರು:- ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯ & ಕುಟುಂಬ ನಿರಪರಾಧಿ ಅಂತ ಕೋರ್ಟ್ ಹೇಳಿಲ್ಲ ಎಂದು ವಿಜಯೇಂದ್ರ ಹೇಳಿದ್ದಾರೆ.
ಮುಡಾ ಕೇಸನ್ನು ಸಿಬಿಐ ತನಿಖೆಗೆ ಕೊಡಬೇಕು ಎಂಬ ಅರ್ಜಿಯನ್ನ ಹೈಕೋರ್ಟ್ ವಜಾ ಮಾಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮುಡಾ ಕೇಸ್ ತನಿಖೆಯನ್ನ ಸಿಬಿಐಗೆ ಕೊಡೋದು ಬೇಡ ಅಂತ ಹೈಕೋರ್ಟ್ ಹೇಳಿದೆಯೇ ಹೊರತು ಸಿದ್ದರಾಮಯ್ಯ ಮತ್ತು ಅವರ ಕುಟುಂಬ ನಿರಪರಾಧಿ ಅಂತ ಹೇಳಿಲ್ಲ. ಸ್ನೇಹಮಯಿ ಕೃಷ್ಣ ಹೈಕೋರ್ಟ್ನಲ್ಲಿ ಮುಡಾ ಕೇಸನ್ನು ಸಿಬಿಐ ತನಿಖೆಗೆ ವಹಿಸಬೇಕು ಅಂತ ಅರ್ಜಿ ಹಾಕಿದ್ರು. ಕೋರ್ಟ್ ಅವರ ಅರ್ಜಿ ವಜಾ ಮಾಡಿದೆ. ಸಿಬಿಐಗೆ ಕೊಡೋ ಅರ್ಜಿ ಮಾತ್ರ ಕೋರ್ಟ್ ವಜಾ ಮಾಡಿದೆ. ಆದರೆ, ಸಿದ್ದರಾಮಯ್ಯ ನಿರಪರಾಧಿ ಅಂತ ಹೇಳಿಲ್ಲ ಎಂದರು.
ಬಿಜೆಪಿ ಮುಡಾ ಅಕ್ರಮದ ವಿರುದ್ದ ಹೋರಾಟ ಮಾಡಿತ್ತು. ಪಾದಯಾತ್ರೆ ಕೂಡಾ ಮಾಡಿತ್ತು. ಇವತ್ತಿನ ಕೋರ್ಟ್ ತೀರ್ಪಿನಿಂದ ನಮ್ಮ ಹೋರಾಟಕ್ಕೆ ಹಿನ್ನಡೆ ಆಗಿಲ್ಲ. ಮುಡಾ ಅಕ್ರಮದ ಬಗ್ಗೆ ಇಡಿ, ಲೋಕಾಯುಕ್ತ ತನಿಖೆ ಆಗ್ತಿದೆ. ಮುಂದೆ ಎನ್ ಆಗುತ್ತೋ ನೋಡೋಣ ಎಂದರು.