ಗುಡ್ಡ ಕುಸಿತದಲ್ಲಿ ಕಾಣೆಯಾಗಿದ್ದ ಅವಂತಿಕಾಳ ಮೃತದೇಹ ಪತ್ತೆ!

0
Spread the love

ಉತ್ತರ ಕನ್ನಡ: ಗುಡ್ಡ ಕುಸಿತದಲ್ಲಿ ಕಾಣೆಯಾಗಿದ್ದ ಅವಂತಿಕಾಳ ಮೃತದೇಹ ಇಂದು ಪತ್ತೆಯಾಗಿದೆ. ಜುಲೈ 16 ರಂದು ಅಂಕೋಲಾ ತಾಲೂಕಿನ ಶಿರೂರು ನಲ್ಲಿ ನಡೆದ ಗುಡ್ಡ ಕುಸಿತದಲ್ಲಿ ಒಂದೇ ಕುಟುಂಬದ ಐವರು ಕಣ್ಮರೆಯಾಗಿದ್ದರು. ಐವರ ಪೈಕಿ ಮೂವರ ಮೃತದೇಹ ಪತ್ತೆಯಾಗಿತ್ತು.
ಲಕ್ಷ್ಮಣ ನಾಯ್ಕ, ಪತ್ನಿ ಶಾಂತಿ ನಾಯ್ಕ, ಮಗ ರೋಶನ್ ನಾಯ್ಕ ಮೃತದೇಹ ಪತ್ತೆಯಾಗಿತ್ತು. ಇದೀಗ ಬಾಲಕಿ ಅವಂತಿಕಾ ಮೃತದೇಹ ಕೂಡ ಪತ್ತೆಯಾಗಿದೆ.
ಕುಮಟಾ ತಾಲೂಕಿನ ಗಂಗೆಕೊಳ್ಳದ ಸಮುದ್ರ ತೀರದಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಮೃತದೇಹವನ್ನು ಗೋಕರ್ಣದ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ.

Advertisement

Spread the love

LEAVE A REPLY

Please enter your comment!
Please enter your name here