ಕಾಂಗ್ರೆಸ್ ಹೈಕಮಾಂಡ್ ಅಣತಿಯಂತೆ ಸಿಎಂ ಬದಲಾವಣೆ ಚರ್ಚೆ ನಡೆಯುತ್ತಿದೆ: ಬಿವೈ ವಿಜಯೇಂದ್ರ ಟಾಂಗ್ !

0
Spread the love

ಬೆಂಗಳೂರು:- ಸಿಎಂ ರಾಜೀನಾಮೆ ನಿಶ್ಚಿತ, ಖಾಲಿಯಾಗುವ ಸ್ಥಾನಕ್ಕೆ ಹಗ್ಗಜಗ್ಗಾಟ ಶುರುವಾಗಿದೆ ಎಂದು ಬಿವೈ ವಿಜಯೇಂದ್ರ ಟಾಂಗ್ ಕೊಟ್ಟಿದ್ದಾರೆ.

Advertisement

ಈ ಸಂಬಂಧ ಮಾತನಾಡಿದ ಅವರು,ಮುಖ್ಯಮಂತ್ರಿಗಳು ಹಾಗೂ ಅವರ ಕುಟುಂಬ ಭ್ರಷ್ಟಾಚಾರದಲ್ಲಿ ನೇರವಾಗಿ ಭಾಗಿಯಾಗಿರುವ ಕಾರಣ ಸಿಎಂ ಅವರು ನಿಶ್ಚಿತವಾಗಿ ರಾಜೀನಾಮೆ ಕೊಡಲಿದ್ದಾರೆ ಎಂದರು.

ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರಲ್ಲಿ ಎಳ್ಳಷ್ಟೂ ಅನುಮಾನ ಇಲ್ಲ. ದಿನ ಬೆಳಗಾದರೆ, ನಾನೂ ಮುಖ್ಯಮಂತ್ರಿ ಆಗ್ಬೇಕು. ನನಗೂ ಆಸೆ ಇದೆ. ನಾನೇನೂ ಸನ್ಯಾಸಿ ಅಲ್ಲ ಎಂದು ಅನೇಕ ಕಾಂಗ್ರೆಸ್ ಮುಖಂಡರು ಹೇಳಿಕೆ ನೀಡುತ್ತಿದ್ದಾರೆ. ಎಂ.ಬಿ ಪಾಟೀಲ್, ಬಸವರಾಜ ರಾಯರೆಡ್ಡಿ, ಆರ್.ವಿ.ದೇಶಪಾಂಡೆ ಮೊದಲಾದವರು ಹೇಳಿಕೆ ಕೊಟ್ಟಿದ್ದಾರೆ.

ಮತ್ತೊಂದು ಕಡೆ ಇಂಥ ಹೇಳಿಕೆ ನಿಲ್ಲಿಸಲು ಸೂಚಿಸುವಂತೆ ಕಾಂಗ್ರೆಸ್ ಮುಖಂಡರೇ ಅವರ ಹೈಕಮಾಂಡ್‌ಗೆ ಪತ್ರ ಬರೆದಿದ್ದಾರೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಆಶೀರ್ವಾದದಿಂದಲೇ ಕಾಂಗ್ರೆಸ್ಸಿನ ಹಿರಿಯ ನಾಯಕರು ಹೇಳಿಕೆ ಕೊಡುತ್ತಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಈಗಾಗಲೇ ಹಗ್ಗಜಗ್ಗಾಟ ಶುರುವಾಗಿದೆ. ಯಾವುದೇ ಸಂದರ್ಭದಲ್ಲಿ ಬೇಕಾದರೂ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ನುಡಿದಿದ್ದಾರೆ.


Spread the love

LEAVE A REPLY

Please enter your comment!
Please enter your name here