ಚಾಲಕನ ನಿಯಂತ್ರಣ ತಪ್ಪಿ ಬರೋಬ್ಬರಿ 17 ಬೈಕ್ʼಗಳಿಗೆ ಡಿಕ್ಕಿ ಹೊಡೆದ ಕಾರು!

0
Spread the love

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕು ಬಾಣಾವರ ಹೋಬಳಿಯಲ್ಲಿರುವ ಕೆಂಕೆರೆ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ನಿಂತಿದ್ದ ಹದಿನೇಳು ಬೈಕ್‌ಗಳಿಗೆ ಗುದ್ದಿದ ಘಟನೆ ನಡೆದಿದೆ. ಮಳೆ ಜೋರಾಗಿ ಸುರಿಯುತ್ತಿದ್ದ ಕಾರಣ ಬೈಕ್ ಸವಾರರು ತಮ್ಮ ವಾಹನಗಳನ್ನು ಅಲ್ಲಿನ ಬಸ್ ನಿಲ್ದಾಣದ ಬದಿಯ ರಸ್ತೆಯಲ್ಲಿ ನಿಲ್ಲಿಸಿ ಬಸ್ ಸ್ಟಾಪ್ ನಲ್ಲಿ ಆಶ್ರಯ ಪಡೆದಿದ್ದಾರೆ.

Advertisement

ದುಬಾರಿ ಕಾರೊಂದನ್ನು ಓಡಿಸಿಕೊಂಡು ಬರುತ್ತಿದ್ದವನಿಗೆ ಪ್ರಾಯಶಃ ಮಳೆಯಿಂದಾಗಿ ರಸ್ತೆ ಸರಿಯಾಗಿ ಕಂಡಿಲ್ಲ. ಕಾರಿನ ಮೇಲೆ ಅವನ ನಿಯಂತ್ರಣ ತಪ್ಪಿದ್ದರಿಂದ ಬಸ್ ಸ್ಟ್ಯಾಂಡ್ ಬಳಿ ನಿಲ್ಲಿಸಿದ್ದ 17 ಬೈಕ್ ಗಳಿಗೆ ಗುದ್ದಿದ್ದಾನೆ. ನೆಲ್ಲಕುರುಳಿದ ವಾಹನಗಳೆಲ್ಲ ಜಖಂಗೊಂಡಿವೆ. ಅದೃಷ್ಟವಶಾತ್ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಸಂಬಂಧ ಬಾಣಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here