ಬೆಂಗಳೂರು:– ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A1 ಆರೋಪಿಯಾಗಿ ಜೈಲು ಸೇರಿರುವ ಪವಿತ್ರಾಗೌಡ ನೆನೆದು ಮಗಳು ಭಾವುಕ ಪೋಸ್ಟ್ ಹಾಕಿದ್ದಾರೆ.
Advertisement
ನಿಮ್ಮನ್ನು ತಾಯಿಯಾಗಿ ಪಡೆಯಲು ಪುಣ್ಯ ಮಾಡಿದ್ದೀನಿ ಎಂದು ಅಮ್ಮ ಪವಿತ್ರಾರನ್ನು ನೆನೆದು ಪೋಸ್ಟ್ ಹಂಚಿಕೊಂಡಿದ್ದಾರೆ.
ಯಾವುದೇ ಪರಿಸ್ಥಿತಿ ಇರಲಿ ನನ್ನ ಸಹಾಯಕ್ಕೆ ಬಂದೇ ಬರುತ್ತಾರೆ. ಈ ದಿನಗಳಲ್ಲಿ ನನಗೆ ಏನೇ ಬೇಕಿದ್ದರೂ ಅಮ್ಮ ನನ್ನ ಜೊತೆಗೆ ಇದ್ದಾಳೆ ಎಂದು ನನಗೆ ಗೊತ್ತು. ಹೀಗಾಗಿನೇ ಆಕೆಯನ್ನು ಬೆಸ್ಟ್ ಅಮ್ಮ ಎಂದು ಕರೆಯುವುದು. ನಿಮ್ಮನ್ನು ತಾಯಿಯಾಗಿ ಪಡೆಯುವುದಕ್ಕೆ ಪುಣ್ಯ ಮಾಡಿದ್ದೀನಿ. ಲವ್ ಯೂ ಅಮ್ಮ ಎಂದು ಪುತ್ರಿ ಸೋಶಿಯಲ್ ಮೀಡಿಯಾದಲ್ಲಿ ಎಮೋಷನಲ್ ಆಗಿ ಪೋಸ್ಟ್ ಶೇರ್ ಮಾಡಿದ್ದಾರೆ.