ಹುಬ್ಬಳ್ಳಿ: ರಾಜ್ಯ ಸರ್ಕಾರದ ಬಳಿ ರಸ್ತೆ ರಿಪೇರಿಗೂ ಹಣವಿಲ್ಲ. ಇನ್ನು ಸಮಾನಾಂತರ ಜಲಾಶಯ ಹೇಗೆ ನಿರ್ಮಾಣ ಮಾಡುತ್ತಾರೆ? ಎಂದು ಸಚಿವ ಜೋಶಿ ಪ್ರಶ್ನಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬೇಕಾಬಿಟ್ಟಿ ಆಡಳಿತ, ಭ್ರಷ್ಟಾಚಾರದ ಫಲವಾಗಿ ರಾಜ್ಯ ಸರ್ಕಾರ ದಿವಾಳಿಯಾಗಿದೆ.
Advertisement
ಹಾಗಾಗಿ ಜಲಾಶಯಗಳ ವ್ಯವಸ್ಥಿತ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದೆ. ರಾಜ್ಯ ಸರ್ಕಾರದ ಬಳಿ ರಸ್ತೆ ರಿಪೇರಿಗೂ ಹಣವಿಲ್ಲ. ಇನ್ನು ಸಮಾನಾಂತರ ಜಲಾಶಯ ಹೇಗೆ ನಿರ್ಮಾಣ ಮಾಡುತ್ತಾರೆ? ಎಂದು ಹೇಳಿದ್ದಾರೆ.
ಇನ್ನೂ ಹಿಂದೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿದ್ದಾಗ ಜಲಾಶಯಗಳ ನಿರ್ವಹಣೆಗೆ ಪ್ರತಿ ವರ್ಷ 10,000 ಕೋಟಿ ವೆಚ್ಚ ಮಾಡುವುದಾಗಿ ಹೇಳಿದ್ದರು. ಆದರೆ, ಪ್ರತಿ ವರ್ಷವಲ್ಲ ಆಡಳಿತದ 5 ವರ್ಷವೂ ಹತ್ತು ಸಾವಿರ ಕೋಟಿ ಖರ್ಚು ಮಾಡಲಿಲ್ಲ ಎಂದು ಹೇಳಿದ್ದಾರೆ.