ನಾಡಿನ ಸಂಪತ್ತನ್ನು ವಾಮಮಾರ್ಗದಲ್ಲಿ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ: ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ

0
Spread the love

ಕೊಪ್ಪಳ: ನಾಡಿನ ಸಂಪತ್ತನ್ನು ವಾಮಮಾರ್ಗದಲ್ಲಿ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಕೊಪ್ಪಳದಲ್ಲಿಂದು ಮಾತನಾಡಿದ ಅವರು, ಪ್ರತಿನಿತ್ಯ ಗ್ಯಾರಂಟಿ ಭಜನೆ ಮಾಡೋದು,

Advertisement

ಕೇಂದ್ರ ಸರ್ಕಾರವನ್ನ ದೂಷಣೆ ಮಾಡೋದು ಬಿಟ್ಟು ಬೇರೆ ಏನನ್ನೂ ಈ ಸರ್ಕಾರದಿಂದ ನಿರೀಕ್ಷಿಸಲು ಸಾಧ್ಯವಿಲ್ಲ. ಕೆಕೆಆರ್‌ಡಿಬಿಗೆ 5,000 ಕೋಟಿ ರೂ. ಕೊಡ್ತೇವೆ ಅಂತ ಹೇಳಿದ್ರು. ಈವರೆಗೆ ನಯಾಪೈಸೆ ಬಿಡುಗಡೆ ಆಗಿಲ್ಲ. ಸರ್ಕಾರದ ಖಜಾನೆ ಖಾಲಿಯಾಗಿದೆ.

ಅಭಿವೃದ್ಧಿಯಲ್ಲಿ ಹೆಚ್ಚಿನ ಹಣ ಸೋರಿಕೆಯಾಗುತ್ತಿದೆ. ನಾಡಿನ ಜನತೆ ಸರ್ಕಾಕದ ಖಜಾನೆ ತುಂಬಿಸಲು ಸಹಕಾರ ನೀಡಿದ್ದಾರೆ. ಗ್ಯಾರಂಟಿ ಹೆಸರಲ್ಲಿ ಹೆಚ್ಚಿನ ತೆರಿಗೆ ಹಾಕಿದ್ದಾರೆ. ಆದ್ರೆ ಈ ಹಣ ಎಲ್ಲಿ ಹೋಗುತ್ತಿದೆ? ನಾಡಿನ ಸಂಪತ್ತನ್ನು ವಾಮಮಾರ್ಗದಲ್ಲಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here