ಬೆಂಗಳೂರು: ಸಿಎಂ ಬದಲಾವಣೆ ಬಗ್ಗೆ ಯಾರು ಚರ್ಚೆ ಮಾಡಬಾರದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಗರದಲ್ಲಿ ಮುಂದಿನ ಸಿಎಂ ಡಿಕೆಶಿ ಎಂಬ ಶಾಸಕ ಬಾಲಕೃಷ್ಣ ಹೇಳಿಕೆ ಕುರಿತು ಮಾತನಾಡಿದ ಅವರು, ಸಿಎಂ ಬದಲಾವಣೆ ಬಗ್ಗೆ ಯಾರು ಚರ್ಚೆ ಮಾಡಬಾರದು.
ಈ ಬಗ್ಗೆ ಚರ್ಚೆ ಮಾಡದಂತೆ ಹೈಕಮಾಂಡ್ ಹೇಳಿದೆ. ಸರ್ಕಾರ ಚೆನ್ನಾಗಿ ನಡೆಯುತ್ತಿದೆ. ಸಿಎಂ ಒಳ್ಳೇ ಕೆಲಸ ಮಾಡುತ್ತಿದ್ದಾರೆ. ನಾವೆಲ್ಲಾ ಸಿಎಂ ಜತೆ ಇದ್ದೇವೆ. ಇದನ್ನು ನಿಲ್ಲಿಸಬೇಕು ಅಂತಾ ಮನವಿ ಮಾಡುತ್ತೇವೆ ಎಂದು ಹೇಳಿದರು.
ಇನ್ನೂ ಸಿಎಂ ಬದಲಾಗುತ್ತಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆ ನೀಡಿದ್ದ ವಿಚಾರಕ್ಕೆ, ವಿಪಕ್ಷ ನಾಯಕ ಆರ್.ಅಶೋಕ್ ಮೊದಲು ತಮ್ಮ ಕುರ್ಚಿ ನೋಡಿ ಕೊಳ್ಳಲಿ. ಮುಂದೆ ಏನಾಗುತ್ತೆ ಎಂದು ಅಶೋಕ್ ಅವರಿಗೆ ಗೊತ್ತಿಲ್ಲ ಅವರೇ ವಿರೋಧ ಪಕ್ಷದ ನಾಯಕರಾಗಿ ಇರುತ್ತಾರೋ..? ಇಲ್ವೋ..? ಸುಮ್ಮನೆ ಯಾಕೆ ಭವಿಷ್ಯವಾಣಿ ನುಡಿಯುತ್ತಾರೆ. ಅಶೋಕ್ ಅವರೇ ಜನರ ಮುಂದೆ ನಗೆಪಾಟಲೀಗೀಡಾಗಬೇಡಿ ಎಂದು ಹೇಳಿದ್ದಾರೆ.