ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವುದನ್ನು ಸರ್ಕಾರ ತಡೆಗಟ್ಟಲಿ: ಬಿವೈ ವಿಜಯೇಂದ್ರ!

0
Spread the love

ಬೆಂಗಳೂರು :ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವುದನ್ನು ಸರ್ಕಾರ ತಡೆಗಟ್ಟಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.

Advertisement

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣದ ಬಗ್ಗೆ ರಾಜ್ಯ ಸರಕಾರ ಇದೀಗ ಎಸ್‍ಐಟಿ ರಚಿಸಿದೆ. ಶೀಘ್ರದಲ್ಲಿ ತನಿಖೆ ಆಗಲಿ. ಪಾರದರ್ಶಕ ತನಿಖೆ ಆಗಿ ಸತ್ಯಾಂಶ ಹೊರಬರಬೇಕೆಂಬುದು ಎಲ್ಲರ ಆಶಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.

ಈ ವಿಚಾರ ಇಟ್ಟುಕೊಂಡು ಅಲ್ಲಿನ ವಾತಾವರಣ ಹಾಳು ಮಾಡುವ, ಅಲ್ಲಿನ ವ್ಯವಸ್ಥೆ ಹಾಳು ಮಾಡುವುದು, ಅಪಪ್ರಚಾರ ಮಾಡುವುದನ್ನು ಸರಕಾರ ತಡೆಯಬೇಕು. ಇದರ ಹಿಂದಿನ ಕುತಂತ್ರ ನಮಗೂ ತಿಳಿದಿದೆ. ಅಲ್ಲಿನ ವ್ಯವಸ್ಥೆ ಹಾಳು ಮಾಡಲು ಮುಂದಾದರೆ ಏನು ಮಾಡಬೇಕೆಂದು ಚರ್ಚಿಸಿ ನಿರ್ಧರಿಸುತ್ತೇವೆ ಎಂದರು.


Spread the love

LEAVE A REPLY

Please enter your comment!
Please enter your name here