ವಿಜಯಸಾಕ್ಷಿ ಸುದ್ದಿ, ಗದಗ: ಅಲೆಮಾರಿ ಸಮುದಾಯದವರಾದ ಬಂಜಾರ ಸಮಾಜ ಕರ್ನಾಟಕದಲ್ಲಿ ಮೊದಲ ಬಾರಿಗೆ ಕರ್ನಾಟಕ ಬಂಜಾರ ಸಾಹಿತ್ಯ ಪರಿಷತ್ನ್ನು ಸ್ಥಾಪಿಸುತ್ತಿರುವುದು ಸಂತಸದ ಸಂಗತಿ. ಬಂಜಾರ ಸಮುದಾಯದ ಇತಿಹಾಸ ರೋಚಕವಾಗಿದ್ದು, ಶ್ರೀಮಂತ ಬಂಜಾರ ಸಾಹಿತ್ಯ, ಸಂಸ್ಕೃತಿಯನ್ನು ದಾಖಲಿಸುವ ದೃಷ್ಟಿಯಿಂದ ಕರ್ನಾಟಕ ಬಂಜಾರ ಸಾಹಿತ್ಯ ಪರಿಷತ್ತು ದಾಪುಗಾಲು ಇಡುತ್ತಿದೆ. ಸರ್ವರೂ ಪದಗ್ರಹಣ ಕಾರ್ಯಕ್ರದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಕರ್ನಾಟಕ ಬಂಜಾರ ಸಾಹಿತ್ಯ ರಾಜ್ಯ ಗೌರವಾಧ್ಯಕ್ಷ ಡಾ. ಪಿ.ಕೆ. ಖಂಡೋಭಾ ಹಾಗೂ ರಾಜ್ಯ ಘಟಕದ ಅಧ್ಯಕ್ಷ ಶ್ರೀಕಾಂತ ಆರ್.ಜಾಧವ್ ಹೇಳಿದರು.
ಅವರು ನಗರದ ಕಳಸಾಪೂರ ರಸ್ತೆಯ ಶ್ರೀರಾಮ ಬಂಜಾರ ಭವನದಲ್ಲಿ ನಡೆದ ಸಮಾರಂಭದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕರ್ನಾಟಕ ಬಂಜಾರ ಸಾಹಿತ್ಯ ಪರಿಷತ್ತು ಗದಗ ಜಿಲ್ಲಾ ಘಟಕದ ಅಧ್ಯಕ್ಷರಾದ ಡಾ. ಬಿ.ಎಲ್. ಚವ್ಹಾಣ ಅವರು ಮಾತನಾಡಿ, ಜೂನ್ 29ರಂದು ಮುಂಜಾನೆ 11 ಗಂಟೆಗೆ ನಗರದ ಕಳಸಾಪೂರ ರಸ್ತೆಯ ಶ್ರೀರಾಮ ಬಂಜಾರ ಭವನದಲ್ಲಿ ಗದಗ ಜಿಲ್ಲಾ ಘಟಕದ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜರುಗಲಿದ್ದು, ವಿಧಾನ ಪರಿಷತ್ ಸದಸ್ಯರಾದ ಎಸ್.ವ್ಹಿ. ಸಂಕನೂರ ಕಾರ್ಯಕ್ರಮ ಉದ್ಘಾಟಿಸುವರು. ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಚಂದ್ರು ಲಮಾಣಿ ಅಧ್ಯಕ್ಷತೆ ವಹಿಸುವರು ಎಂದರು.
ಮುಖ್ಯ ಅತಿಥಿಗಳಾಗಿ ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೃಷ್ಣಗೌಡ ಎಚ್.ಪಾಟೀಲ ಆಗಮಿಸುವರು. ಅತಿಥಿಗಳಾಗಿ ಕರ್ನಾಟಕ ಸಾರಿಗೆ ಸಂಸ್ಥೆಯ ಮುಖ್ಯ ಕಾರ್ಮಿಕ ಕಲ್ಯಾಣಾಧಿಕಾರಿ ಪಿ.ವಾಯ್. ನಾಯಕ, ಹುಬ್ಬಳ್ಳಿ ಕರ್ನಾಟಕ ಬಂಜಾರ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷ ಶ್ರೀಕಾಂತ ಆರ್.ಜಾಧವ್, ಉಪಾಧ್ಯಕ್ಷರಾದ ಮಂಜಪ್ಪ ಎಲ್, ರೋಣ ತಹಸೀಲ್ದಾರ ನಾಗರಾಜ ಕೆ, ಕರ್ನಾಟಕ ರಾಜ್ಯ ಬಂಜಾರ ನೌಕರರ ಸಂಘದ ಗದಗ ಅಧ್ಯಕ್ಷ ಡಿ.ಎಲ್. ನಾಯಕ, ರೋಣ ತಾಲೂಕಾ ಬಂಜಾರ ಸಮಾಜದ ಅಧ್ಯಕ್ಷ ಲಾಲಪ್ಪ ರಾಠೋಡ ಗಜೇಂದ್ರಗಡ, ಗದಗ ಜಿಲ್ಲಾ ಬಂಜಾರ ವೇದಿಕೆ ಅಧ್ಯಕ್ಷ ಡಾ. ಭೀಮಸಿಂಗ್ ಎನ್.ರಾಠೋಡ, ಕರ್ನಾಟಕ ಬಂಜಾರ ಸಾಹಿತ್ಯ ಪರಿಷತ್ತು ಹಬ್ಬಳ್ಳಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಎಲ್.ಪಿ. ನಾಯ್ಕ ಕಠಾರಿ, ಗೋರ ಸಿಕವಾಡಿ ರಾಜ್ಯಾಧ್ಯಕ್ಷ ರವಿಕಾಂತ ಅಂಗಡಿ, ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಎಸ್ಸಿ ಘಟಕದ ಕಾರ್ಯದರ್ಶಿ ಸೋಮು ಪಿ.ಲಮಾಡಿ, ಕರ್ನಾಟಕ ರಾಜ್ಯ ಮಧ್ಯಮಿಕ ಶಾಲಾ ನೌಕರರ ಸಂಘ ಗದಗ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಕೆ. ಲಾಮಾಣಿ, ಸ್ಥಳೀಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆ ಹಿರಿಯ ಉಪ ನಿರ್ದೇಶಕ ಎಸ್.ವಾಯ್. ಲಮಾಣಿ, ಆರೋಗ್ಯ ಇಲಾಖೆ ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ವೆಂಕಟೇಶ ರಾಠೋಡ, ಆರ್.ಡಿ.ಪಿಆರ್ ಗದಗ ಸಹಾಯಕ ಕುಮಾರ ಎಲ್.ಪೂಜಾರ, ಸುವರ್ಣ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸುರೇಶ ಟಿ.ರಾಠೋಡ ಆಗಮಿಸುವರು ಎಂದು ಮಾಹಿತಿ ನೀಡಿದರು.
ಕಾಯಾಧ್ಯಕ್ಷ ಡಾ. ಬಿ.ಎಸ್. ರಾಠೋಡ, ಉಪಾಧ್ಯಕ್ಷ ಡಾ. ಕೃಷ್ಣ ಎನ್.ಕಾರಭಾರಿ, ಪ್ರಧಾನ ಕಾರ್ಯದರ್ಶಿ ಡಿ.ಎಸ್. ನಾಯಕ, ಖಜಾಂಚಿ ಡಾ. ಎಂ.ಆರ್. ನಾಯಕ ಸೇರಿದಂತೆ ಪದಾಧಿಕಾರಿಗಳು, ಸದಸ್ಯರು ಹಾಗೂ ಸಮಾಜ ಬಾಂಧವರು ಭಾಗವಹಿಸಿದ್ದರು.
ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಸದಸ್ಯರಾದ ಸಾವಿತ್ರಿ ಲಮಾಣಿ, ಬಂಜಾರ ಗಾಯಕರು ಹಾಗೂ ಸರಿಗಮಪ ರನ್ನರ್ ರಮೇಶ ಲಮಾಣಿ ವಿಷೇಶ ಆಹ್ವಾನಿತರಾಗಿ ಆಗಮಿಸುವರು. ಕರ್ನಾಟಕ ಬಂಜಾರ ಸಾಹಿತ್ಯ ಪರಿಷತ್ ಗದಗ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಬಿ.ಎಲ್. ಚವ್ಹಾಣ ಗೌರವ ಉಪಸ್ಥಿತಿ ವಹಿಸಲಿದ್ದಾರೆ ಎಂದು ತಿಳಿಸಿ, ಸಮಾಜ ಬಾಂಧವರು ಆಗಮಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಸಬೇಕು ಎಂದು ಡಾ. ಬಿ.ಎಲ್. ಚವ್ಹಾಣ ಮನವಿ ಮಾಡಿದರು.