ಬೆಳಗಾವಿ:- ಪರಸ್ತ್ರೀ ಜತೆ ಓಡಿಹೋದ ಗಂಡನನ್ನು ಹುಡುಕಿಕೊಡುವಂತೆ ಠಾಣೆ ಮುಂದೆ ಕುಳಿತು ಗ್ರಾಮ ಪಂಚಾಯಿತಿ ಸದಸ್ಯೆ ಪ್ರತಿಭಟನೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಮಾರಿಹಾಳ ಗ್ರಾಮದಲ್ಲಿ ಜರುಗಿದೆ.
ಪರಸ್ತ್ರೀ ಜತೆ ಬಸವರಾಜ ಸೀತಾಮನಿ ಓಡಿಹೋಗಿರುವ ಪತಿ. ದೂರು ಕೊಟ್ಟರೂ ಸ್ಪಂದಿಸುತ್ತಿಲ್ಲ ಎಂದು ಗ್ರಾಮ ಪಂಚಾಯಿತಿ ಸದಸ್ಯೆ ವಾಣಿಶ್ರೀ ಮಾರಿಹಾಳ ಠಾಣೆ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿ ಪ್ರತಿಭಟನೆ ನಡೆಸಿದ್ದಾರೆ.
25 ದಿನಗಳ ಹಿಂದೆ ವಿವಾಹಿತೆ ಮಾಸಾಬಿ ಜೊತೆ ಬಸವರಾಜ ಸೀತಾಮನಿ ಓಡಿಹೋಗಿರುವ ಆರೋಪ ಮಾಡಲಾಗಿದೆ. ನನ್ನ ಜೀವನ ಹಾಳುಮಾಡಿ ಬೇರೆಯವಳ ಜೊತೆ ಇರಲು ನಾನು ಬಿಡಲ್ಲ. ನನಗೆ ಪತಿ, ಮಕ್ಕಳು ಬೇಕೆಂದು ಗ್ರಾಮ ಪಂಚಾಯಿತಿ ಸದಸ್ಯೆ ವಾಣಿಶ್ರೀ ಪಟ್ಟುಹಿಡಿದಿದ್ದಾರೆ.
ಆಕೆ ಗಂಡನನ್ನು ಬಿಟ್ಟು ನಿಂತಿದ್ದಾಳೆ ಎಂದು ನಾನು ಹಾಗೆಯೇ ನಿಲ್ಲಬೇಕಾ? ಮಾಸಾಬಿಗೆ ನನ್ನ ಪತಿ ಬಸವರಾಜ ಸೀತಾಮನಿ ಬಿಟ್ಟುಕೊಡುವುದಿಲ್ಲ. ನಿನ್ನೆ ನನಗೆ ಕರೆ ಮಾಡಿ ನಿನ್ನ ಗಂಡನನ್ನು ಬಿಡಲ್ಲವೆಂದು ಹೇಳಿದ್ದಾಳೆ. ಹಾಗಾಗಿ ಪೊಲೀಸರೇ ನ್ಯಾಯ ಕೊಡಿಸಬೇಕೆಂದು ವಾಣಿಶ್ರೀ ಒತ್ತಾಯಿಸಿದ್ದಾರೆ.