HomeBelgaumವ್ಯಾಜ್ಯ ನಿರ್ವಹಣಾ ಅಧಿನಿಯಮ ಶೀಘ್ರವೇ ಜಾರಿ

ವ್ಯಾಜ್ಯ ನಿರ್ವಹಣಾ ಅಧಿನಿಯಮ ಶೀಘ್ರವೇ ಜಾರಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಬೆಳಗಾವಿ-ಸುವರ್ಣಸೌಧ: ರಾಜ್ಯದ ನ್ಯಾಯಾಲಯಗಳಲ್ಲಿರುವ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಇತ್ಯರ್ಥಪಡಿಸುವ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ನ್ಯಾಯದಾನ ವ್ಯವಸ್ಥೆಯಲ್ಲಿನ ವಿಳಂಬವನ್ನು ತಡೆಗಟ್ಟುವಲ್ಲಿ ಸರ್ಕಾರ ಅನೇಕ ಕ್ರಮ ಕೈಗೊಂಡಿದೆ ಎಂದು ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಹೇಳಿದರು.

ಪರಿಷತ್‌ನಲ್ಲಿ ಸದಸ್ಯ ಭಾರತಿಶೆಟ್ಟಿ ಅವರ ಪರವಾಗಿ ಸದಸ್ಯ ರವಿಕುಮಾರ ಅವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ನ್ಯಾಯಾಲಯದ ಪ್ರಕರಣಗಳಲ್ಲಿ ಆಡಳಿತ ಇಲಾಖೆಗಳಿಂದ ಸಕಾಲದಲ್ಲಿ ಆಕ್ಷೇಪಣಾ ಹೇಳಿಕೆಗಳನ್ನು ದಾಖಲಿಸಲು ಅನುವಾಗುವಂತೆ, ನ್ಯಾಯಾಲಯ ಹೇಳಿಕೆಗಳನ್ನು ದಾಖಲಿಸಲು ಅನುವಾಗುವಂತೆ ಮತ್ತು ನ್ಯಾಯಾಲಯ ಪ್ರಕರಣಗಳನ್ನು ಸಮರ್ಥವಾಗಿ ನಿರ್ವಹಿಸಲು ಕರ್ನಾಟಕ ಸರ್ಕಾರಿ ವ್ಯಾಜ್ಯ ನಿರ್ವಹಣಾ ಅಧಿನಿಯಮ, 2023 ಜಾರಿಗೆ ಬಂದಿದೆ. ನಿಯಮಗಳನ್ನು ರಚಿಸಿದ್ದು, ಅವುಗಳನ್ನು ಸದ್ಯದಲ್ಲೇ ಜಾರಿಗೆ ತರಲಾಗುತ್ತದೆ ಎಂದರು.

ಸಿವಿಲ್ ಪ್ರಕ್ರಿಯಾ ಸಂಹಿತೆ (ಕರ್ನಾಟಕ ತಿದ್ದುಪಡಿ) ಅಧಿನಿಯಮ, 2023  ದಿನಾಂಕ: 04-03-2024ರಿಂದ ಜಾರಿಗೆ ಬಂದಿರುತ್ತದೆ ಎಂದು ಅವರು ತಿಳಿಸಿದರು.

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಸರ್ಕಾರದ ಪರ 2021ನೇ ಸಾಲಿನಲ್ಲಿ 3216, 2022ನೇ ಸಾಲಿನಲ್ಲಿ 2277, 2023ನೇ ಸಾಲಿನಲ್ಲಿ 2213 ಹಾಗೂ ಸರ್ಕಾರದ ವಿರುದ್ಧವಾಗಿ 2021ನೇ ಸಾಲಿನಲ್ಲಿ 20492, 2022ನೇ ಸಾಲಿನಲ್ಲಿ 16853, 2023ನೇ ಸಾಲಿನಲ್ಲಿ 14994 ಪ್ರಕರಣಗಳು ದಾಖಲಾಗಿವೆ ಎಂದು ಅವರು ಸದನಕ್ಕೆ ತಿಳಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!