ಹಾಸನದಲ್ಲಿ ಕರು ಕೊಂದು ಬಾಡೂಟ ಮಾಡಿದ ಕಿಡಿಗೇಡಿಗಳು ಅರೆಸ್ಟ್!

0
Spread the love

ಹಾಸನ:- ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವನ್ನು ಹೊತ್ತೊಯ್ದು ಕಿಡಿಗೇಡಿಗಳು ಬಾಡೂಟ ಮಾಡಿ ತಿಂದಿರುವ ಘಟನೆ ಹಾಸನದಲ್ಲಿ ಬೆಳಕಿಗೆ ಬಂದಿದೆ.

Advertisement

ಘಟನೆ ಸಂಬಂಧ 7 ಮಂದಿ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಜ್ಗರ್, ಕೌಶಿಕ್, ಮೋಹನ್, ಮನೋಜ್, ಚಂದನ್, ಪವನ್ ಮತ್ತು ಅಜಿತ್ ಬಂಧಿತರು.

ಆಲೂರು ತಾಲೂಕಿನ ಹೆದ್ದುರ್ಗ ಗ್ರಾಮದ ಹೂವಣ್ಣ ಎಂಬುವವರಿಗೆ ಸೇರಿದ್ದ ಕರುವನ್ನು ದುಷ್ಕರ್ಮಿಗಳು ಹೊತ್ತೊಯ್ದು, ಕಡಿದು ಮಾಂಸದೂಟ ಮಾಡಿದ್ದಾರೆ. ಮಂಗಳವಾರ ಕರುವನ್ನು ದುಷ್ಕರ್ಮಿಗಳು ಕದ್ದಿದ್ದರು. ಕರುವಿಗಾಗಿ ಹುಡುಕಾಟ ನಡೆಸಿದಾಗ, ಮಡಬಲು ಗ್ರಾಮದ ರೈಲ್ವೆ ಗೇಟ್ ಸಮೀಪ ಕರುವಿನ ರುಂಡ ಪತ್ತೆಯಾಗಿತ್ತು.

ಆರೋಪಿಗಳು ಸಾಕ್ಷ್ಯ ನಾಶಕ್ಕಾಗಿ ರುಂಡ, ಕರುಳು ಹಾಗೂ ಚರ್ಮವನ್ನು ನದಿಗೆ ಎಸೆಯಲು ಪ್ರಯತ್ನಿಸಿದ್ದರು ಎಂದು ತನಿಖೆಯಲ್ಲಿ ತಿಳಿದು ಬಂದಿದೆ.


Spread the love

LEAVE A REPLY

Please enter your comment!
Please enter your name here