ಮದ್ವೆಯಾದ ಕೆಲ‌ವೇ ಗಂಟೆಯಲ್ಲಿ ರೂಂಗೆ ಹೋಗಿದ್ದ ನವಜೋಡಿ ಸಾವು..! ಇಬ್ಬರ ಮಧ್ಯೆ ಆಗಿದ್ದೇನು?

0
Spread the love

ಕೋಲಾರ: ಕೋಲಾರದ ಕೆಜಿಎಫ್‌ನ ಚಂಬರಸನಹಳ್ಳಿ ಗ್ರಾಮದಲ್ಲಿ ಮದುವೆಯ ಮೊದಲ ರಾತ್ರಿಯೇ ಮಚ್ಚಿನಲ್ಲಿ ಪರಸ್ಪರ ಕೊಚ್ಚಿಕೊಂಡಿದ್ದ ವಧು- ವರ ಪ್ರಕರಣದಲ್ಲಿ, ವಧುವಿನ ಜೊತೆಗೆ ವರನೂ ಮೃತಪಟ್ಟಿದ್ದಾನೆ. ನಿನ್ನೆ ಕೆಜಿಎಫ್ ಆಸ್ಪತ್ರೆಯಲ್ಲಿ ವಧು ಲಿಖಿತಶ್ರೀ (20) ಸಾವನ್ನಪ್ಪಿದ್ದಳು. ಆಸ್ಪತ್ರೆ ಸೇರಿದ್ದ ವರ ನವೀನ್ (28) ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾನೆ. ಕೋಲಾರದ ಅರ್.ಎಲ್. ಜಾಲಪ್ಪ ಆಸ್ಪತ್ರೆಯಲ್ಲಿ ನಿನ್ನೆ ದಾಖಲಾಗಿದ್ದ ನವೀನ್ ಕುಮಾರ್‌ನನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರಾತ್ರಿ ರವಾನಿಸಲಾಗಿತ್ತು.

Advertisement

ನಿನ್ನೆ ಬೆಳಗ್ಗೆ ಅದ್ಧೂರಿಯಾಗಿ ಲಿಖಿತಶ್ರೀ ಹಾಗೂ ನವೀನ್ ಮದುವೆಯಾಗಿತ್ತು. ಕೆಲ‌ಗಂಟೆಗಳ ನಂತರ ರೂಮ್‌ಗೆ ಹೋಗಿದ್ದ ನವದಂಪತಿ ಅಲ್ಲೇ‌ ಹೊಡೆದಾಡಿಕೊಂಡಿದ್ದಾರೆ. ಇಬ್ಬರೂ ಮಚ್ಚು ಹಿಡಿದು ಕೊಚ್ಚಿಕೊಂಡಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡ ಇಬ್ಬರನ್ನೂ ಕೆಜಿಎಫ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ವಧು ನಿನ್ನೆಯೇ ಕೊನೆಯುಸಿರೆಳೆದಿದ್ದಳು. ಸ್ಥಳಕ್ಕೆ ಆ್ಯಂಡರ್‌ಸನ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೋಲಾರ ಜಿಲ್ಲೆ ಕೆಜಿಎಫ್ ತಾಲ್ಲೂಕು ಚಂಬರಸನಹಳ್ಳಿ ಗ್ರಾಮದ ನವೀನ್ ಕೆಲವು ವರ್ಷಗಳಿಂದ ಆಂಧ್ರಪ್ರದೇಶದ ಬೈನಪಲ್ಲಿ ಗ್ರಾಮದ ಲಿಖಿತಶ್ರೀಯನ್ನು ಪ್ರೀತಿಸುತ್ತಿದ್ದ. ಇಬ್ಬರೂ ಸೇರಿ ಕಷ್ಟಪಟ್ಟು ಮನೆಯವರನ್ನು ಒಪ್ಪಿಸಿ ಗ್ರಾಮದಲ್ಲಿ ಸರಳವಾಗಿ ಮದುವೆಯನ್ನೂ ಮಾಡಿಕೊಂಡಿದ್ದಾರೆ. ಬೆಳಗ್ಗೆ ಮದುವೆಯಾದ ಜೋಡಿ ಎಲ್ಲ ಮದುವೆ ಶಾಸ್ತ್ರಗಳು ಮುಕ್ತಾಯಗೊಂಡ ನಂತರ ಒಂದು ಕೋಣೆಯಲ್ಲಿ ಹೋಗಿದ್ದಾರೆ. ಕೆಲ ಹೊತ್ತಿನ ನಂತರ ಕೊಠಡಿಯಲ್ಲಿದ್ದ ಹುಡುಗ ಹುಡುಗಿ ‌ಹೊಡೆದಾಡಿಕೊಂಡಿದ್ದಾರೆ.

ಮದ್ವೆಯಾಗಿ ಇನ್ನೇನು ಸುಖವಾಗಿ ಸಂಸಾರ ಸಾಗಿಸಬೇಕಿದ್ದ ವಧು ದುರಂತ ಅಂತ್ಯಕಂಡಿದ್ದರೆ, ವರ ನವೀನ್ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ್ದಾನೆ. ಆದ್ರೆ,  ಯಾವ ಕಾರಣಕ್ಕೆ ಜೀವ ಹೋಗುವಾಗೆ ಹೊಡೆದುಕೊಂಡರು ಎನ್ನುವುದು ತಿಳಿದುಬಂದಿಲ್ಲ. ಸದ್ಯ ವಿಷಯ ತಿಳಿದು ಸ್ಥಳಕ್ಕೆ ಅಂಡರ್ ಸನ್ ಪೇಟೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

 


Spread the love

LEAVE A REPLY

Please enter your comment!
Please enter your name here