ಕೊರಳಿಗೆ ತಾಳಿ ಬಿದ್ದ ಕೂಡಲೇ ಪರೀಕ್ಷಾ ಕೇಂದ್ರಕ್ಕೆ ಬಂದು ಎಕ್ಸಾಂ ಬರೆದ ನವವಧು!

0
Spread the love

ಹಾಸನ: ಹಾಸನ ನಗರದಲ್ಲಿ ಮದುವೆ ಆದ ಕೆಲವೇ ಹೊತ್ತಲ್ಲಿ ಶೃಂಗಾರದ ಸಮೇತ ನವವಧು ಒಬ್ಬರು ಪರೀಕ್ಷಾ ಕೇಂದ್ರಕ್ಕೆ ಬಂದು ಎಕ್ಸಾಂ ಬರೆದಿದ್ದಾರೆ.

Advertisement

ಕವನ ಪರೀಕ್ಷೆ ಬರೆದ ನವವಧು. ಹಾಸನದ ಪ್ರೈಡ್ ಪದವಿ ಕಾಲೇಜಿನಲ್ಲಿ ಅಂತಿಮ ಬಿಕಾಂ ಓದುತ್ತಿರುವ ಕವನ ಅಂತಿಮ ವರ್ಷದ ಕೊನೆಯ ಸಬ್ಜೆಕ್ಟ್ ಪರೀಕ್ಷೆಗೆ ಹಾಜರಾಗಿದ್ದಾರೆ. ಹಾಸನದ ಗುಡ್ಡೆನಹಳ್ಳಿಯ ದಿನೇಶ್ ಜೊತೆ ಕವನ ಮದುವೆ ನಿಶ್ಚಯವಾಗಿದ್ದು, ಇಂದು ಬೆಳಗ್ಗೆ 9 ಗಂಟೆಗೆ ಮುಹೂರ್ತವಿತ್ತು. ಮಾಂಗಲ್ಯ ಧಾರಣೆ ಆಗುತ್ತಲೇ ಪರೀಕ್ಷಾ ಕೇಂದ್ರಕ್ಕೆ ದೌಡಾಯಿಸಿ ಬಂದ ನವವಧು ಅಂತಿಮ ವರ್ಷದ ಬಿಕಾಂ ಆದಾಯ ತೆರಿಗೆ ಎರಡು ವಿಷಯಗಳ ಪರೀಕ್ಷೆ ಬರೆದಿದ್ದಾರೆ.

ಪರೀಕ್ಷೆ ಬರೆಯಲೇಬೇಕೆಂಬ ಯುವತಿ ಆಸೆಗೆ ಆಕೆಯ ಪೋಷಕರು ಸಾಥ್ ನೀಡಿದ್ದು, ಮುಹೂರ್ತ ಮುಗಿಯುತ್ತಲೇ ಸಹೋದರಿಯನ್ನು ಅಣ್ಣ ಕಾರ್ತಿಕ್ ಪರೀಕ್ಷಾ ಕೇಂದ್ರಕ್ಕೆ ಕರೆ ತಂದಿದ್ದಾರೆ. ಪರೀಕ್ಷೆ ಬರೆದ ಬಳಿಕ ಯುವತಿ ಆರತಕ್ಷತೆಗೆ ಕಲ್ಯಾಣಮಂಟಪಕ್ಕೆ ವಾಪಸ್ ಆಗಿದ್ದಾರೆ.


Spread the love

LEAVE A REPLY

Please enter your comment!
Please enter your name here