ಕಾರವಾರ:- ಕಾಂಗ್ರೆಸ್ ನಾಯಕರ ಮ್ಯೂಸಿಕಲ್ ಚೇರ್ ಆಸೆಗೆ ಕರ್ನಾಟಕ ಜನ ಬಲಿಯಾಗುತ್ತಿದ್ದಾರೆ ಎಂದು ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ನಾಯಕರ ಮ್ಯೂಸಿಕಲ್ ಚೇರ್ ಆಸೆಗೆ ರಾಜ್ಯದ ಜನ ಬಲಿಯಾಗುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಗೆದ್ದ ಶಾಸಕರು ತಮ್ಮ ಕ್ಷೇತ್ರಕ್ಕೆ ಅನುದಾನ ಸಿಗಬೇಕು ಎಂದರೆ ಸುರ್ಜೆವಾಲ ಹತ್ತಿರ ಹೋಗುವ ಸ್ಥಿತಿ ಉದ್ಭವ ಆಗಿದೆ ಎಂದು ಕಿಡಿಕಾರಿದ್ದಾರೆ. ಸರ್ಕಾರದಲ್ಲಿ ಒಬ್ಬರಿಗೆ ಸಿಎಂ ಕುರ್ಚಿ ಉಳಿಸಿಕೊಳ್ಳಬೇಕು ಅಂತ, ಮತ್ತೊಬ್ಬರಿಗೆ ಸಿಎಂ ಕುರ್ಚಿಮೇಲೆ ಕಣ್ಣು, ಮತ್ತೊಬ್ಬರಿಗೆ ಉಪಮುಖ್ಯಮಂತ್ರಿ ಸಿಎಂ ಆದರೇ ಉಪಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣು, ಡಿಸಿಎಂ ಮುಖ್ಯಮಂತ್ರಿ ಆದ್ರೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣು ಒಟ್ಟಿನಲ್ಲಿ ಮ್ಯೂಸಿಕಲ್ ಚೇರ್ ಎನ್ನುವಂತಾಗಿದೆ.
ಕಾಂಗ್ರೆಸ್ ನಾಯಕರ ಮ್ಯೂಸಿಕಲ್ ಚೇರ್ ಆಸೆಗೆ ರಾಜ್ಯದ ಜನ ಬಲಿಯಾಗುತಿದ್ದಾರೆ. ಜನಗಳಿಗೆ ತೆರಿಗೆ ಹಾಕಿ ಲೂಟಿ ಮಾಡುತಿದ್ದಾರೆ. ನಾನು ಮುಂದಿನ ಚುನಾವಣೆಗೆ ನಿಲ್ಲುವ ಬಗ್ಗೆ ಆಲೋಚನೆ ಮಾಡಿಲ್ಲ. ಕುಮಾರಣ್ಣ ರಾಜ್ಯದ ಮುಖ್ಯಮಂತ್ರಿ ಆಗಬೇಕು. ನನ್ನ ಹೋರಾಟ ಜೆಡಿಎಸ್ ಕಟ್ಟಬೇಕು, ಪಕ್ಷ ದಡ ಮುಟ್ಟಿಸಬೇಕು ಎಂದು ತಿಳಿಸಿದರು.