ನೆಲಮಂಗಲ:- ಲವರ್ ಕೈಕೊಟ್ಟಳು ಅಂತ ಪ್ರಿಯತಮನೋರ್ವ ಖಾಸಗಿ ಫೋಟೋ ಹರಿಬಿಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಮಂಜುನಾಥ ನಗರದಲ್ಲಿ ಜರುಗಿದೆ.
Advertisement
ಸದ್ಯ ಬಾಗಲಗುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದರ್ಶನ್ಗಾಗಿ ಪೊಲೀಸರ ಶೋಧ ನಡೆಸಿದ್ದಾರೆ. ಬಾಗಲಗುಂಟೆಯ ಫರ್ನಿಚರ್ ಅಂಗಡಿಯಲ್ಲಿ ಯುವತಿ ಸೇಲ್ಸ್ ಕೆಲಸ ಮಾಡುತ್ತಿದ್ದಳು. ನನ್ನ ಪ್ರೀತಿ ಮಾಡಿಲ್ಲ ಅಂದರೆ ನಿನ್ನ ಜೀವನ ಹಾಳು ಮಾಡುತ್ತೇನೆಂದು ಆರೋಪಿ ದರ್ಶನ್ ಬೆದರಿಕೆ ಕೂಡ ಹಾಕಿದ್ದ.
ವಾಟ್ಸಾಪ್ ಸ್ಟೇಟಸ್ ಹಾಗೂ ಇನ್ಸ್ಟಾಗ್ರಾಮ್ ಸ್ಟೋರಿನಲ್ಲಿ ಖಾಸಗಿ ಫೋಟೋ ಹಾಕಿ ಮಾನಹಾನಿ ಮತ್ತು ತೇಜೋವಧೆಗೆ ಮುಂದಾಗಿದ್ದ. ಹೀಗಾಗಿ ಆರೋಪಿ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರಿಂದ ತನಿಖೆ ಮುಂದುವರಿದಿದೆ.